ಬೆಂಗಳೂರು: ವಿಜಯನಗರದ 22ನೇ ಅಡ್ಡರಸ್ತೆಯಲ್ಲಿ ಗುರುವಾರ ರಮೇಶ್ (45) ಎಂಬುವರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲು ಆಟೊ ಓಡಿಸುತ್ತಿದ್ದ ರಮೇಶ್, ಕೆಲ ದಿನಗಳಿಂದ ಕ್ಯಾಬ್ ಚಾಲನೆ ಮಾಡುತ್ತಿದ್ದರು. ಬೆಳಿಗ್ಗೆ 10 ಗಂಟೆ ಸುಮಾರಿಗೆ ಮನೆಯಲ್ಲೇ ಸೀಮೆಎಣ್ಣೆ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ.
ಮನೆಯಿಂದ ಹೊಗೆ ಬರುತ್ತಿರುವುದನ್ನು ಗಮನಿಸಿದ ಸ್ಥಳೀಯರು, ಬಾಗಿಲು ಮುರಿದು ಒಳಗೆ ಹೋಗಿದ್ದಾರೆ. ಈ ವೇಳೆಗಾಗಲೇ ರಮೇಶ್ ದೇಹ ಸಂಪೂರ್ಣ ಸುಟ್ಟು ಹೋಗಿತ್ತು ಎಂದು ಪೊಲೀಸರು ಹೇಳಿದ್ದಾರೆ.
ಪತಿ ಮಾನಸಿಕ ಅಸ್ವಸ್ಥರಾಗಿದ್ದು, ನೊಂದು ಆತ್ಮಹತ್ಯೆ ಮಾಡಿಕೊಂಡಿರಬಹುದು’ ಎಂದು ಪತ್ನಿ ರಾಣಿ ತಿಳಿಸಿದ್ದಾರೆ.