ಬೆಂಗಳೂರು: ಕಾವೇರಿ ನದಿ ನೀರು ಹಂಚಿಕೆ ವಿವಾದದ ಹಿನ್ನೆಲೆಯಲ್ಲಿ ರಾಜ್ಯದಾದ್ಯಂತ ನಡೆಯುತ್ತಿರುವ ಪ್ರತಿಭಟನೆಗೆ ನಗರದ ಜನರೂ ಬೆಂಬಲ ನೀಡಬೇಕೆಂದು ನಟ, ಕಾಂಗ್ರೆಸ್ ಮುಖಂಡ ಅಂಬರೀಷ್ ಕರೆಕೊಟ್ಟರು.
`ಡ್ರಾಮಾ~ ಚಿತ್ರದ ಸುದ್ದಿಗೋಷ್ಠಿಯಲ್ಲಿ ಅವರು ಮಂಗಳವಾರ ಮಾತನಾಡುತ್ತಾ ಕಾವೇರಿ ನದಿ ವಿವಾದದ ಪ್ರತಿಭಟನೆಯ ಕುರಿತು ಪ್ರತಿಕ್ರಿಯೆ ನೀಡಿದರು.