ಜ. 8ರಿಂದ ಖರೀದಿ ಕೇಂದ್ರಗಳ ಮೂಲಕ ಖರೀದಿಸಲಾಗುತ್ತಿದ್ದು, ಚಿತ್ರದುರ್ಗ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಪ್ರಾಂಗಣ, ಭರಮಸಾಗರ ಉಪಮಾರುಕಟ್ಟೆ ಪ್ರಾಂಗಣ, ಚಿಕ್ಕಜಾಜೂರು ಉಪ ಮಾರುಕಟ್ಟೆ ಪ್ರಾಂಗಣ ಸೇರಿ 3 ಖರೀದಿ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ. ಮೆಕ್ಕೆಜೋಳದ ಗುಣಮಟ್ಟ ಎಫ್ಎಕ್ಯೂ ಗುಣಮಟ್ಟವನ್ನು ಹೊಂದಿರಬೇಕು.
ಚೆನ್ನಾಗಿ ಒಣಗಿಸಿದ ಮೆಕ್ಕೆಜೋಳವನ್ನು ಮಾತ್ರ ಖರೀದಿಸಲಾಗುತ್ತದೆ. ಖರೀದಿ ಕೇಂದ್ರಕ್ಕೆ ತರುವ ಮುನ್ನ ಪ್ರಸಕ್ತ ಸಾಲಿನ ಕಂಪ್ಯೂಟರ್ ಪಹಣಿ ಪಡೆದು ಪ್ರಸಕ್ತ ಸಾಲಿನಲ್ಲಿ ಎಷ್ಟು ಎಕರೆಯಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ ಎನ್ನುವ ಬಗ್ಗೆ ರೈತರ ಭಾವಚಿತ್ರ ಸಮೇತ ಸಹಿಯನ್ನು ಗ್ರಾಮಲೆಕ್ಕಾಧಿಕಾರಿಗಳು ಹಾಗೂ ತಹಶೀಲ್ದಾರ್ ಅವರಿಂದ ದೃಢೀಕರಿಸಿದ ದಾಖಲೆಯನ್ನು ಹಾಜರುಪಡಿಸಬೇಕು. ಖರೀದಿ ಕೇಂದ್ರಗಳ ಮೂಲಕ 2011ರ ಮಾರ್ಚ್ ಅಂತ್ಯದವರೆಗೆ ಖರೀದಿಸಲಾಗುತ್ತದೆ ಎಂದು ತಿಳಿಸಿದ್ದಾರೆ.
ಇಂದು ಪರಿಸರ ಜಾಗೃತಿ ರ್ಯಾಲಿ
ಯುವವಕೀಲರ ಪರಿಸರ ಸಂರಕ್ಷಣಾ ವೇದಿಕೆ ವತಿಯಿಂದ ಜ.8ರಂದು ಬೆಳಿಗ್ಗೆ 9ಕ್ಕೆ ಪರಿಸರ ಜಾಗೃತಿ ರ್ಯಾಲಿ ಹಮ್ಮಿಕೊಳ್ಳಲಾಗಿದೆ. ಉಪ ಅರಣ್ಯ ಸಂರಕ್ಷಣಾಧಿಕಾರಿ ಶ್ರೀನಿವಾಸಲು, ವಲಯ ಅರಣ್ಯಾಧಿಕಾರಿ ರಾಮಪ್ಪ, ವಕೀಲರ ಸಂಘದ ಕಾರ್ಯದರ್ಶಿ ಎ.ಸಿ. ರಘು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.