ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಟಗೇರಿ: ಕಡಲೆಬೆಳೆ ಕ್ಷೇತ್ರೋತ್ಸವ

Last Updated 11 ಜನವರಿ 2014, 7:10 IST
ಅಕ್ಷರ ಗಾತ್ರ

ಕೊಪ್ಪಳ: ತಾಲ್ಲೂಕಿನ ಬೆಟಗೇರಿ ಗ್ರಾಮದಲ್ಲಿ ಅಳವಂಡಿಯ ರೈತ ಸಂಪರ್ಕ ಕೇಂದ್ರದ ವತಿಯಿಂದ ಕಡಲೆ ಬೆಳೆ ತಾಲ್ಲೂಕುಮಟ್ಟದ ಕ್ಷೇತ್ರೋತ್ಸವ ಇತ್ತೀಚೆಗೆ ನಡೆಯಿತು.

ಕೃಷಿವಿಜ್ಞಾನಿ ಡಾ.ಮಲ್ಲಿಕಾರ್ಜುನ ಕೆಂಗನಾಳ ಮಾತನಾಡಿ, ರೈತರು ತಾವು ಸಸಿಗಳ ಕುಡಿ ಚಿವುಟುವುದು, ಯೂರಿಯಾ ಸಿಂಪಡಣೆಯಿಂದ ಉತ್ತಮ ಬೆಳೆ ಬೆಳೆಯಬಹುದು, ಹೊಸ ಹೊಸ ತಂತ್ರಜ್ಞಾನವನ್ನು ಬಳಸಿಕೊಂಡು ಹೆಚ್ಚಿನ ಇಳುವರಿ ಪಡೆಯಬಹುದೆಂದು ಸಲಹೆ ನೀಡಿದರು.

ಗ್ರಾಮದ ರೈತ ಗುರುಬಸಯ್ಯ ಬೃಹನ್ಮಠ ಅವರ ಹೊಲದಲ್ಲಿ ನಡೆದ ಕಾರ್ಯಕ್ರಮವನ್ನು ತಾಲ್ಲೂಕು ಪಂಚಾಯಿತಿ ಸದಸ್ಯ ವೀರೇಶ್‌ ಸಜ್ಜನ್‌ ಉದ್ಘಾಟಿಸಿದರು. ಗ್ರಾ.ಪಂ.ಅಧ್ಯಕ್ಷೆ ಲಲಿತಾ ಶರಣಪ್ಪ ಹೂಗಾರ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ.ಸದಸ್ಯರಾದ ಶರಣಪ್ಪ ಮತ್ತೂರು, ಗವಿಸಿದ್ದಪ್ಪ ಮಾಳೆಕೊಪ್ಪ, ರೈತರಾದ ನಾರಾಯಣಪ್ಪ ಕೊರಣ್ಣವರ್, ಗ್ರಾಮದ ಹಿರಿಯರಾದ ಸೋಮಪ್ಪ ಮತ್ತೂರು, ಕೃಷಿ ಅಧಿಕಾರಿಗಳಾದ ವಿ.ಎನ್.ಮ್ಯಾಗೇರಿ, ಪಿ.ಬಿ.ಕುಲಕರ್ಣಿ, ರೈತ ಅನುವುಗಾರ ಏಳೂಕೋಟೇಶ ಕೋಮಲಾಪುರ  ಭಾಗವಹಿಸಿದ್ದರು. ಕೃಷಿ ಅಧಿಕಾರಿ ರಾಜೇಶ್ವರಿ ಚಿನಿವಾರ ಕಾರ್ಯಕ್ರಮ ನಿರೂಪಿಸಿದರು. ಶಿವನಗೌಡ ನಾಗರಡ್ಡಿ ವಂದಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT