ಕಮ್ಮಟ ಜ.17ರಂದು ಬೆಳಿಗ್ಗೆ 10 ರಿಂದ ಹಾಸನದ ರಾಮಕೃಷ್ಣ ವಿದ್ಯಾಲಯದ ಆವರಣದಲ್ಲಿ ನಡೆಯಲಿದ್ದು. ಕಥೆ, ಕವನ ಹಾಗೂ ಪ್ರಬಂಧ ಸ್ಪರ್ಧೆ ಜೊತೆಗೆ ಹಿರಿಯ ಸಾಹಿತಿಗಳಿಂದ ಉಪನ್ಯಾಸ ಏರ್ಪಡಿಸಲಾಗಿದೆ. 8 ರಿಂದ 16 ವರ್ಷದೊಳಗಿನ ಮಕ್ಕಳಿಗೆ ಅವಕಾಶ ಇರುತ್ತದೆ.
ಹಾಸನ ತಾಲ್ಲೂಕು ವ್ಯಾಪ್ತಿಯ ಆಸಕ್ತ ಅರ್ಹ ಮಕ್ಕಳು ಪಾಲ್ಗೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಶಿಶು ಅಭಿವೃದ್ಧಿ ಯೋಜನಾಧಿಕಾರಿ, ಸಮಗ್ರ ಶಿಶು ಅಭಿವೃದ್ಧಿ ಯೋಜನೆ, ಹಾಸನ ಅಥವಾ ದೂರವಾಣಿ 08172–-267223, 9844511424 ಸಂಪರ್ಕಿಸಬಹುದು.