ಮಧ್ಯೆ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ನಿತಿನ್ ಗಡ್ಕರಿ ಅವರು ತಮ್ಮ ಆರಂಭಿಕ ಭಾಷಣದಲ್ಲಿ ಈಶಾನ್ಯ ರಾಜ್ಯಗಳಲ್ಲಿನ ಉಗ್ರಗಾಮಿ ಚಟುವಟಿಕೆಗಳ ಸಹಿತ ಕೇಂದ್ರ ಸರ್ಕಾರದ ಹಲವು ವೈಫಲ್ಯಗಳ ಬಗ್ಗೆ ಪ್ರಸ್ತಾಪಿಸಿದ್ದು, ಉಗ್ರಗಾಮಿ ಸಮಸ್ಯೆ ಬಗೆಹರಿಸುವ ಮಾರ್ಗೋಪಾಯಗಳನ್ನು ಸೂಚಿಸುವ ನಿರ್ಣಯವನ್ನು ಸಭೆಯಲ್ಲಿ ಕೈಗೊಳ್ಳಲಾಗುವುದು ಎಂದಿದ್ದಾರೆ.