ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಲೆ ಕುಸಿತ ಚಿಂತೆ!

Last Updated 9 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಳ್ತಂಗಡಿ: ಪೊಲೀಸ್ ತಂಡ ತಮ್ಮ ಸದೋದ್ಯೋಗಿಯನ್ನು ಕಳೆದುಕೊಂಡು ದುಃಖದ ಮಡುವಿನಲ್ಲಿ ಮುಳುಗಿದ್ದರೆ ಸ್ಥಳದಲ್ಲಿದ್ದ ಸವಣಾಲು ಗ್ರಾ.ಪಂ. ಅಧ್ಯಕ್ಷೆಗೆ ನಕ್ಸಲ್ ಪ್ಯಾಕೇಜ್ ಚಿಂತೆಯಾದರೆ, ಗ್ರಾ.ಪಂ. ಸದಸ್ಯನಿಗೆ ಜಾಗದ ಬೆಲೆ ಕಡಿಮೆಯಾಗುತ್ತದೆ ಎಂಬ ಆತಂಕ!

`ನಮ್ಮ ಗ್ರಾಮದಲ್ಲಿ ನಕ್ಸಲರು ಇರುವ ಬಗ್ಗೆ ಇಲ್ಲಿಯವರೆಗೂ ಪೊಲೀಸರು ಬಾಯಿ ಬಿಟ್ಟಿರಲಿಲ್ಲ. ಈಗ ಮೊದಲ ಬಾರಿ ಗ್ರಾಮದಲ್ಲಿ ಕಾಣಿಸಿಕೊಂಡಿದ್ದಾರೆ. ಇತ್ತೀಚೆಗೆ ನಡೆದ ಜನಸಂಪರ್ಕ ಸಭೆಯಲ್ಲಿ ಗ್ರಾಮಕ್ಕೆ ವಿಶೇಷ ಪ್ಯಾಕೇಜ್ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಲು ತೀರ್ಮಾನಿಸಲಾಗಿದೆ. ರಸ್ತೆ, ವಿದ್ಯುತ್ ಸೌಕರ್ಯಕ್ಕೆ ಮೊದಲ ಆದ್ಯತೆ ನೀಡಬೇಕು~ ಎಂದು ಸವಣಾಲು ಗ್ರಾ.ಪಂ. ಅಧ್ಯಕ್ಷೆ ವಿಮಲಾ ವಿನಂತಿಸಿದರು.

`ಈ ಘಟನೆ ನಮ್ಮ ಗ್ರಾಮಕ್ಕೆ ಕಪ್ಪುಚುಕ್ಕೆ. ಇನ್ನು ಊರಿನಲ್ಲಿ ಜಾಗ ಕೊಳ್ಳಲು ಯಾರೂ ಬರುವುದಿಲ್ಲ. ಭೂಮಿಯ ಬೆಲೆ ಕುಸಿಯಲಿದೆ~ ಎಂದು ಗ್ರಾ.ಪಂ. ಸದಸ್ಯರೊಬ್ಬರು ಆತಂಕ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT