ಬುಧವಾರ, 24 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೆಳೆಹಾನಿ: ಪರಿಹಾರಕ್ಕೆ ಸೂಚನೆ

Last Updated 19 ಫೆಬ್ರುವರಿ 2011, 16:55 IST
ಅಕ್ಷರ ಗಾತ್ರ

ಬೆಂಗಳೂರು: ಆನೆ, ಕೃಷ್ಣ ಮೃಗ ಸೇರಿದಂತೆ ಇತರ ವನ್ಯ ಪ್ರಾಣಿಗಳ ಹಾವಳಿಯಿಂದ ಆಗುತ್ತಿರುವ ಬೆಳೆ ಹಾನಿಗೆ ತಕ್ಷಣ ಪರಿಹಾರ ನೀಡಲು ಅರಣ್ಯ ಸಚಿವ ಸಿ.ಎಸ್.ವಿಜಯಶಂಕರ್ ಶನಿವಾರ ಇಲ್ಲಿ ಅಧಿಕಾರಿಗಳಿಗೆ ಸೂಚಿಸಿದರು. ಇಲ್ಲಿನ ಅರಣ್ಯಭವನದಲ್ಲಿ ನಡೆದ ಅಧಿಕಾರಿಗಳು ಮತ್ತು ಕೆಲ ಜನಪ್ರತಿನಿಧಿಗಳ ಸಭೆಯಲ್ಲಿ ಈ ನಿರ್ಧಾರಕ್ಕೆ ಬರಲಾಗಿದೆ. ಆನೆ ಹಾವಳಿಯಿಂದ ಹಾಸನ, ಕೊಡಗು, ಚಿಕ್ಕಮಗಳೂರು ಭಾಗದಲ್ಲಿ ಅಪಾರ ನಷ್ಟ ಆಗುತ್ತಿದ್ದು, ರೈತರಿಗೆ ತಕ್ಷಣವೇ ಪರಿಹಾರ ನೀಡಬೇಕು.

ಹಾಗೆಯೇ ಕೃಷ್ಣ ಮೃಗಗಳ ಹಾವಳಿಯಿಂದ ಕೊಪ್ಪಳ ಜಿಲ್ಲೆಯಲ್ಲಿ ರೈತರು ಸಂಕಷ್ಟಕ್ಕೆ ತುತ್ತಾಗಿದ್ದಾರೆ. ತಹವರಿಗೆ ್ಙ 25 ಸಾವಿರ ನಷ್ಟ ಆಗಿದ್ದರೆ, ಅಷ್ಟೂ ಮೊತ್ತದ ಪರಿಹಾರ ನೀಡುವುದು. ನಷ್ಟದ ಪ್ರಮಾಣ ಇದಕ್ಕಿಂತ ಜಾಸ್ತಿಯಾದರೆ, ಅದರ ಅರ್ಧದಷ್ಟು ಪರಿಹಾರ ನೀಡಲು ಸಭೆಯಲ್ಲಿ ನಿರ್ಧರಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT