ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಬೇಡಿಕೆ ಈಡೇರುವವರೆಗೆ ಉಪವಾಸ: ಹೊರಟ್ಟಿ

Last Updated 19 ಫೆಬ್ರುವರಿ 2011, 6:35 IST
ಅಕ್ಷರ ಗಾತ್ರ

ಧಾರವಾಡ: ‘ಶಿಕ್ಷಕರ ಸಮಸ್ಯೆಗಳನ್ನು ಈಡೇರಿಸುವವರೆಗೆ ಆಮರಣ ಉಪವಾಸ ಸತ್ಯಾಗ್ರಹವನ್ನು ಕೈಬಿಡುವುದಿಲ್ಲ’ ಎಂದು ಕರ್ನಾಟಕ ಮಾಧ್ಯಮಿಕ ಶಾಲಾ ನೌಕರರ ಸಂಘದ ಅಧ್ಯಕ್ಷರೂ ವಿಧಾನ ಪರಿಷತ್ ಸದಸ್ಯರೂ ಆದ ಬಸವರಾಜ ಹೊರಟ್ಟಿ ಸ್ಪಷ್ಟಪಡಿಸಿದರು. ಶಿಕ್ಷಕರ ಬೇಡಿಕೆಗಳನ್ನು ಈಡೇರಿಸಬೇಕೆಂದು ಒತ್ತಾಯಿಸಿ ನಗರದ ಶಿಕ್ಷಣ ಇಲಾಖೆಯ ಆಯುಕ್ತರ ಕಚೇರಿ ಎದುರು ಶುಕ್ರವಾರ ಅವರು ಆಮರಣ ಉಪವಾಸ ಸತ್ಯಾಗ್ರಹ ಆರಂಭಿಸಿದರು.

ಸಂಜೆ ಸ್ಥಳಕ್ಕೆ ಸಂಸದ ಪ್ರಹ್ಲಾದ ಜೋಶಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಜಗದೀಶ ಶೆಟ್ಟರ ಭೇಟಿ ನೀಡಿ ಸತ್ಯಾಗ್ರಹ ಕೈಬಿಡುವಂತೆ ಕೋರಿಕೊಂಡಾಗ ಕೈಬಿಡುವುದಿಲ್ಲ ಎಂದು ಹೊರಟ್ಟಿಯವರು ಪಟ್ಟು ಹಿಡಿದರು. ‘ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಖುದ್ದಾಗಿ ಶಿಕ್ಷಕರ ಸಮಸ್ಯೆಗಳನ್ನು ಆಲಿಸಬೇಕು. ನಮ್ಮನ್ನು ಆಹ್ವಾನಿಸುವರೆಗೆ ಆಮರಣ ಉಪವಾಸ ಸತ್ಯಾಗ್ರಹವನ್ನು ಬಿಡೆವು. ಇದಕ್ಕಾಗಿ ಸತ್ರೂ ಚಿಂತೆ ಮಾಡುವುದಿಲ್ಲ’ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT