ನವದೆಹಲಿ: ಸಮಾಜವಾದಿ ಪಕ್ಷದ ನಾಯಕ ಮುಲಾಯಂ ಸಿಂಗ್ ಅವರಿಗೆ ಉಗ್ರರ ನಂಟಿದೆ ಎಂಬ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಒಳಗಾಗಿರುವ ಕೇಂದ್ರ ಸಚಿವ ಬೇನಿ ಪ್ರಸಾದ್ ವಿರುದ್ಧ ಯಾವುದೇ ಕ್ರಮ ಕೈಗೊಳ್ಳಲು ಕಾಂಗ್ರೆಸ್ ಮೀನಮೇಷ ಎಣಿಸುತ್ತಿದೆ.
ಕಾಂಗ್ರೆಸ್ನಲ್ಲಿರುವ ಕೆಲವು ನಾಯಕರು `ಬೇನಿ ಪ್ರಸಾದ್ ಅವರು ತಮ್ಮ ರಾಜಕೀಯ ಹಿತಾಸಕ್ತಿಗಾಗಿ ಉತ್ತರ ಪ್ರದೇಶದಲ್ಲಿ ಮತ ಬ್ಯಾಂಕ್ ರಾಜಕಾರಣ ಮಾಡುತ್ತಿದ್ದು, ಇದಕ್ಕಾಗಿ ಸಮಾಜವಾದಿ ಪಕ್ಷದ ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆಗಳನ್ನು ನೀಡುತ್ತಿದ್ದಾರೆ' ಎಂದು ಆರೋಪಿಸಿದ್ದಾರೆ.