ಕಠ್ಮಂಡು (ಐಎಎನ್ಎಸ್): ಭಾರತದ ಬೋಧಗಯಾ ದೇವಾಲಯದ ಮೇಲೆ ನಡೆದ ಬಾಂಬ್ ದಾಳಿ ಹಿನ್ನೆಲೆಯಲ್ಲಿ ನೇಪಾಳದ ಪ್ರಸಿದ್ಧ ಬೌದ್ಧ ದೇವಾಲಯಗಳಿಗೆ ಹೆಚ್ಚಿನ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ.
ಭಗವಾನ್ ಬುದ್ಧನ ಜನ್ಮಸ್ಥಳ ಲುಂಬಿನಿ ಮತ್ತು ಕಪಿಲ್ವಾಸ್ತು ಸ್ಥಳಗಳಲ್ಲೂ ನೇಪಾಳ ಸರ್ಕಾರ ಮುನ್ನೆಚ್ಚರಿಕೆ ಕ್ರಮವಾಗಿ ಹೆಚ್ಚಿನ ಭದ್ರತೆ ಕಲ್ಪಿಸಿದೆ.
ಮುನ್ನೆಚ್ಚರಿಕೆ ಕ್ರಮವಾಗಿ ಪ್ರಮುಖ ಬೌದ್ಧ ಯಾತ್ರಾ ಸ್ಥಳಗಳಾದ ಲುಂಬಿನಿ, ಬೌದ್ಧ (ಬೋಧನಾಥ್) ಮತ್ತು ಸೈಂಭೂ (ಸ್ವಯಂಭೂನಾಥ್) ನಲ್ಲಿ ಹೆಚ್ಚಿನ ಭದ್ರತೆ ಕಲ್ಪಿಸಲು ನಿರ್ಧರಿಸಲಾಗಿದೆ ಎಂದು ನೇಪಾಳ ಪೊಲೀಸ್ ವಕ್ತಾರ ನವ್ರಾಜ್ ಸಿಲ್ವಲ್ ಸುದ್ದಿಸಂಸ್ಥೆಗೆ ಮಾಹಿತಿ ನೀಡಿದ್ದಾರೆ.