ಪ್ರತಿಭಟನೆ ತೀವ್ರಗೊಂಡ ಹಿನ್ನೆಲೆಯಲ್ಲಿ ತುಮಕೂರಿನಿಂದ ಬ್ಯಾಂಕ್ ಎಜಿಎಂ ರಮಾನಂದ್ ಸ್ಥಳಕ್ಕೆ ಧಾವಿಸಿ ಬಂದರು. ನಂತರ ತಹಶೀಲ್ದಾರ್ ಡಾ.ರವಿ ಎಂ.ತಿರ್ಲಾಪುರ್, ಬಿಜೆಪಿ ಮುಖಂಡ ಡಿ.ಕೃಷ್ಣಕುಮಾರ್, ಬ್ಯಾಂಕ್ ವ್ಯವಸ್ಥಾಪಕಿ ಗೀತಾ, ಪಿಎಸ್ಐ ಚನ್ನಯ್ಯಹಿರೇಮಠ್ ಸಮ್ಮುಖದಲ್ಲಿ ಗ್ರಾಮಸ್ಥರೊಂದಿಗೆ ಚರ್ಚಿಸಿ ಸಾಲ ಮನ್ನಾ ಮಾಡುವ ಲಿಖಿತ ಭರವಸೆಯನ್ನು ಬ್ಯಾಂಕ್ ಅಧಿಕಾರಿಗಳು ನೀಡಿದರು. ನಂತರ ಪ್ರತಿಭಟನೆ ವಾಪಸ್ ಪಡೆಯಲಾಯಿತು.