ಜೋಧಪುರ, ರಾಜಸ್ತಾನ (ಪಿಟಿಐ): ನರ್ಸ ಭಂವರಿದೇವಿ ನಾಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಲ್ಲಿನ ಜೋಳದ ಗ್ರಾಮದ ಸಮೀಪದ ರಾಜೀವ್ಗಾಂಧಿ ಎಡದಂತೆ ಕಾಲುವೆಯಿಂದ ಭವಂರಿದೇವಿಗೆ ಸಂಬಂಧಿಸಿದೆ ಎನ್ನಲಾದ ವಾಚ್, ಕೊರಳಿನ ಸರ ಸೇರಿದಂತೆ ಪ್ರಮುಖ ವಸ್ತುಗಳನ್ನು ಸಿಬಿಐ ಅಧಿಕಾರಿಗಳು ಶನಿವಾರ ವಶಪಡಿಸಿಕೊಂಡಿದ್ದಾರೆ.
ಭಂವರಿ ದೇವಿ ಅವರನ್ನು ಕೊಲೆ ಮಾಡಿದ ನಂತರ ಈ ವಸ್ತುಗಳನ್ನು ಇಲ್ಲಿನ ಕಾಲುವೆಯಲ್ಲಿ ಎಸೆಯಲಾಗಿತ್ತು ಎಂದು ಹೇಳಲಾಗಿದೆ.
ಪ್ರಕರಣಕ್ಕೆ ಸಂಬಂಧಪಟ್ಟ ಇನ್ನು ಪ್ರಮುಖ ವಸ್ತುಗಳು ಕಾಲುವೆಯಲ್ಲಿ ದೊರೆಯಬಹುದು ಎನ್ನುವ ಹಿನ್ನೆಲೆಯಲ್ಲಿ ಕಾಲುವೆಗೆ ನೀರು ಬಿಡುವುದನ್ನು ತಾತ್ಕಾಲಿಕವಾಗಿ ನಿಲ್ಲಿಸುವಂತೆ ರಾಜಸ್ತಾನ ಸರ್ಕಾರವು ಸಂಬಂಧಪಟ್ಟ ಇಲಾಖೆಗೆ ಆದೇಶಿಸಿದೆ.