ಆರೋಗ್ಯ ಮತ್ತು ಕುಡಿಯುವ ನೀರಿನ ಸೌಕರ್ಯ ಒದಗಿಸುವ ಹಿನ್ನೆಲೆಯಲ್ಲಿ ಶ್ರೀಮಠ ಕಾರ್ಯನಿರ್ವಹಿಸಲಿದೆ ಎಂದು ತಿಳಿಸಿದರು. ಮಂತ್ರಾಲಯದ ಗ್ರಾಮ ಹಾಗೂ ವಿದ್ಯಾಪೀಠದ ಅಭಿವೃದ್ಧಿಗಾಗಿ ಅನೇಕ ಯೋಜನೆಗಳ ರೂಪಿಸಲಾಗುವುದು. ವಿಶೇಷವಾಗಿ ಶಿಕ್ಷಣ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಹಿರಿಯ ಪೀಠಾಧಿಪತಿಗಳಾದ ಶ್ರೀ ಸುಯತೀಂದ್ರ ತೀರ್ಥರು ಆದೇಶಾನುಸರವಾಗಿ ರಾಘವೇಂದ್ರ ಸ್ವಾಮಿಗಳ ಮಠದ ಸೇವೆ ಸಲ್ಲಿಸಲಾಗುವುದು ಎಂದು ಹೇಳಿದರು.
ನೂತನ ಪೀಠಾಧಿಪತಿಗಳ ಪೂರ್ವಾಶ್ರಮದ ತಂದೆಯವರಾದ ರಾಜಾ ಎಸ್ ಗಿರಿರಾಜಾಚಾರ್ಯ ಮಾತನಾಡಿದದರು. ಸಾನಿಧ್ಯವನ್ನು ಹಿರಿಯ ಪೀಠಾಧಿಪತಿಗಳಾದ ಸುಯತೀಂದ್ರ ತೀರ್ಥರು ವಹಿಸಿದ್ದರು. ಪೀಠಾಧಿಪತಿಗಳ ಆಪ್ತ ಕಾರ್ಯದರ್ಶಿ ರಾಜಾಗೋಪಾಲಾಚಾರ್ಯ, ಹೆಚ್ಚುವರಿ ಆಪ್ತ ಕಾರ್ಯದರ್ಶಿ ಸುಯಮೀಂದ್ರಾಚಾರ್ಯ, ಡಾ.ವಾದಿರಾಜಾಚಾರ್ಯ ಸೇರಿದಂತೆ ಅನೇಕ ಭಕ್ತರು ಉಪಸ್ಥಿತರಿದ್ದರು.