ಎಲ್ಲ ಧರ್ಮಗಳೂ ಮಾನವೀಯ ಮೌಲ್ಯಗಳನ್ನೇ ಎತ್ತಿ ಹೇಳುತ್ತವೆ. ಆದರೂ ನೈತಿಕ ಶಿಕ್ಷಣದ ಕೊರತೆ ಇದೆ. ಸ್ವಾರ್ಥ ತುಂಬಿ ತುಳುಕುತ್ತಿದೆ.
ಮಾನವೀಯ ಮೌಲ್ಯಗಳನ್ನು, ಸುಸಂಸ್ಕೃತ ನಡವಳಿಕೆಗಳನ್ನು ಮಕ್ಕಳಲ್ಲಿ ಬೆಳೆಸುವ ಮೂಲಕವೇ ಭವಿಷ್ಯದ ಸಮಾಜವನ್ನು ರೂಪಿಸುವ ಹೊಣೆ ಎಲ್ಲರ ಮೇಲಿದೆ.
ಈ ನಿಟ್ಟಿನಲ್ಲಿ ಸರ್ಕಾರ ಭಗವದ್ಗೀತೆಯನ್ನು ಮಕ್ಕಳು ಪಠಣ ಮಾಡಲು ಚಿಂತಿಸಿರುವುದು ಸೂಕ್ತವಾಗಿದೆ. ಮಕ್ಕಳಲ್ಲಿ ಉತ್ತಮ ಗುಣಗಳನ್ನು ಬೆಳೆಸಲು ಇದು ಸೂಕ್ತ ಸಮಯ.