ವಿಶ್ವಸಂಸ್ಥೆ (ಪಿಟಿಐ): ವಿಶ್ವಸಂಸ್ಥೆ ಭದ್ರತಾ ಮಂಡಳಿಯಲ್ಲಿ ಇದೇ 11ರಂದು ಶಾಂತಿ, ಭದ್ರತೆ ಮತ್ತು ಅಭಿವೃದ್ಧಿ ಕುರಿತು ನಡೆಯಲಿರುವ ಉನ್ನತ ಮಟ್ಟದ ಸಭೆಯಲ್ಲಿ ವಿದೇಶಾಂಗ ವ್ಯವಹಾರ ಸಚಿವ ಎಸ್.ಎಂ. ಕೃಷ್ಣ ಭಾಗವಹಿಸುವ ನಿರೀಕ್ಷೆ ಇದೆ. ಈ ಸಂದರ್ಭದಲ್ಲಿ ಅವರು ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತ ನಡೆಸುತ್ತಿರುವ ಯತ್ನದ ಬಗ್ಗೆ ಪ್ರಸ್ತಾಪಿಸಲಿದ್ದಾರೆ. ಭದ್ರತಾ ಮಂಡಳಿ ಸುಧಾರಣೆ ವಿಷಯವನ್ನು ಸಭೆಯಲ್ಲಿ ಮಂಡಿಸುವ ನಿರೀಕ್ಷೆ ಇದೆ.