ಬೆಂಗಳೂರು: ಭದ್ರಾ ಮೇಲ್ದಂಡೆ ಯೋಜನೆಯ ಗುತ್ತಿಗೆ ನೀಡುವಲ್ಲಿ ನಡೆದಿರುವ ಅವ್ಯವಹಾರಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸಿ ವರದಿ ನೀಡಲು ಲೋಕಾಯುಕ್ತ ವಿಶೇಷ ನ್ಯಾಯಾಲಯ ಇದೇ 22ರವರೆಗೂ ಕಾಲಾವಕಾಶ ನೀಡಿದೆ.
ಈ ಮುಂಚೆ ಸೆ.3ರ ಒಳಗೆ ವರದಿ ನೀಡುವಂತೆ ಸೂಚಿಸಲಾಗಿತ್ತು. ಆದರೆ ಸೆ.22ರವರೆಗೂ ಕಾಲಾವಕಾಶಬೇಕು ಎಂದು ಲೋಕಾಯುಕ್ತ ವಕೀಲರು ಮನವಿ ಮಾಡಿದ ಹಿನ್ನೆಲೆಯಲ್ಲಿ ನ್ಯಾಯಾಧೀಶ ಎನ್.ಕೆ.ಸುಧೀಂದ್ರರಾವ್ ಅವರು ಶನಿವಾರ ವಿಚಾರಣೆಯನ್ನು ಮುಂದೂಡಿದರು. ಜೆಡಿಎಸ್ ವಕ್ತಾರ ವೈ.ಎಸ್.ವಿ.ದತ್ತ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಖಾಸಗಿ ದೂರು ದಾಖಲಿಸಿದ್ದಾರೆ.