ಬೆಂಗಳೂರು (ಪಿಟಿಐ): ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಸುತ್ತಿಕೊಂಡಿರುವ ಹಗರಣಗಳ ಕಬಂಧಬಾಹು ಮತ್ತಷ್ಟು ಬಿಗಿಯಾಗುತ್ತಿದೆ. ಭದ್ರಾ ಮೇಲ್ದಂಡೆ ಯೋಜನೆಯಲ್ಲಿ ಪೊಲೀಸರು ಸಲ್ಲಿಸಿದ್ದ `ಬಿ~ ವರದಿಯನ್ನು ಲೋಕಾಯುಕ್ತ ನ್ಯಾಯಾಲಯ ಸಾರಾಸಗಟಾಗಿ ಶನಿವಾರ ತಿರಸ್ಕರಿಸಿ ಮತ್ತಷ್ಟು ತನಿಖೆಗೆ ಆದೇಶಿಸಿದೆ.
ನ್ಯಾಯಾಧೀಶ ಎನ್.ಕೆ. ಸುಧೀಂದ್ರರಾವ್ ಅವರು ಲೋಕಾಯುಕ್ತ ಪೊಲೀಸರು ಸಲ್ಲಿಸಿದ್ದ `ಬಿ~ ರಿಪೋರ್ಟ್ನ್ನು ತಿರಸ್ಕರಿಸಿ 21 ದಿನಗಳಲ್ಲಿ ಹೆಚ್ಚಿನ ತನಿಖೆ ನಡೆಸಿ ವರದಿ ಸಲ್ಲಿಸುವಂತೆ ಸೂಚನೆ ನೀಡಿ ಪ್ರಕರಣದ ವಿಚಾರಣೆಯನ್ನು ಜೂನ್ 18ಕ್ಕೆ ಮುಂದೂಡಿದರು.