ನವದೆಹಲಿ (ಪಿಟಿಐ): ಭಾರತ ವಿರೋಧಿ ಭಯೋತ್ಪಾದಕರಿಗೆ ಆಶ್ರಯ ನೀಡುವುದಿಲ್ಲ ಎಂದು ಸ್ಪಷ್ಟಪಡಿಸಿರುವ ಬಾಂಗ್ಲಾದೇಶ, ಅಪರಾಧಿಗಳ ಹಸ್ತಾಂತರಕ್ಕೆ ಸಂಬಂಧಿಸಿದ ಒಪ್ಪಂದಕ್ಕೆ ಭಾರತದ ಜತೆ ಶೀಘ್ರ ಒಪ್ಪಂದ ಮಾಡಿಕೊಳ್ಳಲಾಗುತ್ತದೆ ಎಂದು ತಿಳಿಸಿದೆ.
ಭಯೋತ್ಪಾದನೆ ನಿರ್ಮೂಲನೆಗೆ ಎಲ್ಲಾ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಬಂಗ್ಲಾದೇಶದ ಗೃಹ ಸಚಿವೆ ಶಹಾರಾ ಖಾತುನ್ ಅವರು ಗೃಹ ಸಚಿವ ಚಿದಂಬರಂ ಜತೆ ನಡೆಸಿದ ಜಂಟಿ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.