ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರತನಾಟ್ಯ ರಂಗಪ್ರವೇಶ

Last Updated 2 ಸೆಪ್ಟೆಂಬರ್ 2011, 19:30 IST
ಅಕ್ಷರ ಗಾತ್ರ

ರಾಜರಾಜೇಶ್ವರಿ ಕಲಾನಿಕೇತನ: ಶನಿವಾರ ಗುರು ವೀಣಾ ಮೂರ್ತಿ ವಿಜಯ್ ಅವರ ಶಿಷ್ಯೆ ಶ್ವೇತಾ ಕಾಶೆಟ್ಟಿ ಭರತನಾಟ್ಯ ರಂಗಪ್ರವೇಶ.

ಆರನೇ ವರ್ಷದಲ್ಲೇ ಗುರು ವೀಣಾಮೂರ್ತಿ ವಿಜಯ್ ಅವರ ಬಳಿ ಭರತನಾಟ್ಯ ಅಭ್ಯಾಸ ಆರಂಭಿಸಿದ ಶ್ವೇತಾ ಕಳೆದ 11 ವರ್ಷಗಳಿಂದ ಕಲಿಕೆ ಮುಂದುವರಿಸಿದ್ದಾರೆ.

ಭರತನಾಟ್ಯದಲ್ಲಿ ಜ್ಯೂನಿಯರ್ ಗ್ರೇಡ್ ಉತ್ತೀರ್ಣರಾಗಿದ್ದು, ಹಲವು ವೇದಿಕೆಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ. ರಾಜರಾಜೇಶ್ವರಿ ಕಲಾನಿಕೇತನದ ನೃತ್ಯ ತಂಡದ ಸದಸ್ಯೆಯಾಗಿಯೂ ಹಲವು ರೂಪಕಗಳಲ್ಲಿ ಭಾಗವಹಿಸಿದ್ದಾರೆ.

ಪ್ರಸ್ತುತ `ಪಿಇಎಸ್‌ಐಟಿ~ಯಲ್ಲಿ ಎಂಜಿನಿಯರಿಂಗ್ ಓದುತ್ತಿರುವ ಶ್ವೇತಾ, ಬರಹಗಾರ್ತಿಯೂ ಹೌದು. ಅವರ ಈ ಸಾಧನೆಗೆಲ್ಲ ತಂದೆ ಕುಮಾರ್ ಮತ್ತು ತಾಯಿ ಅನಿತಾ ಅವರ ಬೆಂಬಲವಿದೆ. ಸ್ಥಳ: ಜೆಎಸ್‌ಎಸ್ ಸಭಾಂಗಣ, 1ನೇ ಮುಖ್ಯರಸ್ತೆ, ಜಯನಗರ 8ನೇ ಬ್ಲಾಕ್. ಸಂಜೆ 6.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT