ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭರತನಾಟ್ಯ ರಂಗಪ್ರವೇಶ

Last Updated 29 ಜೂನ್ 2011, 19:30 IST
ಅಕ್ಷರ ಗಾತ್ರ

ಆರಾಧನಾ ಸ್ಕೂಲ್ ಆಫ್ ಡಾನ್ಸ್: ಶುಕ್ರವಾರ  ಸೌಮ್ಯ ಆರ್. ಪುರೋಹಿತ್ ಅವರ ಭರತನಾಟ್ಯ ರಂಗಪ್ರವೇಶ, ಅತಿಥಿಗಳು: ಎಚ್. ಕೆ. ಪಾಟೀಲ್, ಕೃಷ್ಣ ಬೈರೇಗೌಡ, ಡಾ. ಮಹೇಶ ಜೋಶಿ, ಎಸ್. ಐ. ಭಾವಿಕಟ್ಟಿ, ಡಾ. ಎಂ. ಸೂರ್ಯ ಪ್ರಸಾದ್.
ಸೌಮ್ಯ 5ರ ಎಳವೆಯಲ್ಲೇ ಭರತನಾಟ್ಯ ಕಲಿಯಲಾರಂಭಿಸಿದವರು.

13 ವರ್ಷದಿಂದ ಸಂಜಯ್ ನಗರದ ಆರಾಧನಾ ನೃತ್ಯ ಶಾಲೆಯಲ್ಲಿ ನೃತ್ಯಾಭ್ಯಾಸ ಮಾಡುತ್ತ್ದ್ದಿದು, ಮಹಾಬಲಿಪುರಂ ಉತ್ಸವ, ತಂಜಾವೂರಿನ ಭಾರತೀಯ ನೃತ್ಯ ಉತ್ಸವ, ಹಂಪಿ ಉತ್ಸವ, ಪಣಜಿಯಲ್ಲಿ ನಡೆದ ಕನ್ನಡ ರಾಜ್ಯೋತ್ಸವ, ಮುಂಬೈನಲ್ಲಿ ನಡೆದ ಅಖಿಲ ಭಾರತ ಗಮಕ ಸಮ್ಮೇಳನಗಳಲ್ಲಿ ಕಾರ್ಯಕ್ರಮ ನೀಡಿದ್ದಾರೆ

ಭರತನಾಟ್ಯದ ಜೊತೆ 6ನೇ ವರ್ಷದಲ್ಲೇ ಸಂಗೀತಾಭ್ಯಾಸವನ್ನು ಆರಂಭಿಸ್ದ್ದಿದವರು. ಸಂಗೀತದಲ್ಲಿ ಜ್ಯೂನಿಯರ್ ಪರೀಕ್ಷೆ, ಮೀರಜ್‌ನ ಗಂಧರ್ವ ಮಹಾವಿದ್ಯಾಲಯದ ಸಂಗೀತ ಪರೀಕ್ಷೆಯಲ್ಲೂ ಉತ್ತಮ ಗ್ರೇಡ್ ಪಡೆದು ತೇರ್ಗಡೆಯಾಗಿದ್ದಾರೆ.

ಪ್ರತಿಭಾ ಹೆಗ್ಡೆ ಅವರಿಂದ ಹಿಂದುಸ್ತಾನಿ ಶಾಸ್ತ್ರೀಯ ಸಂಗೀತ, ಪಂಡಿತ್ ವಿಶ್ವನಾಥ ನಾಕೋಡ ಅವರ ಬಳಿ ಸುಗಮ ಸಂಗೀತ ಅಭ್ಯಾಸ ಮಾಡುತ್ತಿದ್ದಾರೆ.

ಶಾಸ್ತ್ರೀಯ ನೃತ್ಯದಲ್ಲಿ ಪರಿಪೂರ್ಣತೆ ಮತ್ತು ಪರಿಶುದ್ಧತೆ ಇರಬೇಕೆಂದು ಬಯಸುವ ಸೌಮ್ಯ ಜ್ಞಾನದಾಹಿ. ಆಕೆಯ ಅಭಿನಯ ನೋಡುಗರ ಮೇಲೆ ಮಾಂತ್ರಿಕ ಜಾಲ ಬೀಸುತ್ತದೆ.

ನೃತ್ಯ, ಸಂಗೀತದ ಜೊತೆ ಪಠ್ಯದಲ್ಲೂ ಮುಂದಿದ್ದು ಪಿಯುಸಿ ಪೂರ್ಣಗೊಳಿಸಿದ್ದಾರೆ. ಎಂಜಿನಿಯರಿಂಗ್ ಕಾಲೇಜು ಪ್ರವೇಶದ ನಿರೀಕ್ಷೆಯಲ್ಲಿದ್ದಾರೆ.ಸೌಮ್ಯಳ ಗುರು ವಿದ್ವಾನ್ ನಾಗಭೂಷಣ ಎರಡು ದಶಕಗಳಿಂದ ಭರತನಾಟ್ಯ ಕ್ಷೇತ್ರದಲ್ಲಿ ಇದ್ದಾರೆ.

ಚೆನ್ನೈ ಕಲಾಕ್ಷೇತ್ರ ಮಾದರಿಯ ನೃತ್ಯಕ್ಕೆ ಹೆಸರಾದ ಉಷಾ ದಾತಾರ್ ಮತ್ತು ವಿದುಷಿ ಗೀತಾ ಅನಂತ್‌ನಾರಾಯಣನ್ ಅವರ ಶಿಷ್ಯರು. ಅವರ ಆರಾಧನಾ ನೃತ್ಯ ಶಾಲೆ ಹಲವು ಪ್ರತಿಭೆಗಳಿಗೆ ವೇದಿಕೆಯಾಗಿದೆ.

ಸ್ಥಳ: ರವೀಂದ್ರ ಕಲಾಕ್ಷೇತ್ರ, ಜೆ.ಸಿ. ರಸ್ತೆ. ಸಂಜೆ 6. 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT