ಗೋಕಾಕ: 2008- 09ನೇ ಸಾಲಿನ ಭಾಗ್ಯಲಕ್ಷ್ಮಿ ಯೋಜನೆ ಬಾಂಡ್ಗಳನ್ನು ಫಲಾನುಭವಿಗಳಿಗೆ ಶೀಘ್ರವೇ ನೀಡುವಂತೆ ಆಗ್ರಹಿಸಿ ಕನ್ನಡ ಸೇನೆ ತಾಲ್ಲೂಕು ಘಟಕದ ಕಾರ್ಯಕರ್ತರು ಈಚೆಗೆ ತಹಶೀಲ್ದಾರ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಬಾಂಡ್ಗಳನ್ನು ನೀಡಲು ವಿಳಂಬ ನೀತಿ ಅನುಸರಿಸಬಾರದು. ಅರ್ಹ ಫಲಾನುಭವಿಗಳಿಗೆ ಶೀಘ್ರವೇ ತಲುಪಿಸುವಂತೆ ಆಗ್ರಹಿಸಿ ತಹಶೀಲ್ದಾರ ಉದಯ ಕುಂಬಾರ ಅವರಿಗೆ ಮನವಿ ಸಲ್ಲಿಸಿದರು.
ಸಂಘಟನೆಯ ಜಿಲ್ಲಾ ಸಂಚಾಲಕ ಕುಮಾರ ಶಿಡ್ಲಪ್ಪಗೋಳ, ತಾಲ್ಲೂಕು ಘಟಕದ ಅಧ್ಯಕ್ಷ ಯುನೂಸ್ ನದಾಫ್, ಲಕ್ಷ್ಮಣ ವ್ಯಾಪಾರಿ, ನಿಂಗರಾಜ ಗೌಡರ, ಫಯಾಜ್ ಫೀರಜಾದೆ, ಮಲ್ಲಪ್ಪ ಮಡಿವಾಳರ ಹಾಜರಿದ್ದರು.