ಇಸ್ಲಾಮಾಬಾದ್ (ಪಿಟಿಐ): ಮುಂಬೈನಲ್ಲಿ 2008ರಲ್ಲಿ ನಡೆದ ದಾಳಿಯ ತನಿಖಾ ಅಧಿಕಾರಿಗಳನ್ನು ಸಂದರ್ಶಿಸುವ ಸಲುವಾಗಿ ಪಾಕಿಸ್ತಾನದ ನ್ಯಾಯಾಂಗ ಆಯೋಗ ಫೆಬ್ರುವರಿ 3ರಿಂದ ಭಾರತಕ್ಕೆ ನಾಲ್ಕು ದಿನಗಳ ಭೇಟಿ ನೀಡಲಿದೆ ಎಂದು ಒಳಾಡಳಿತ ಸಚಿವ ರೆಹಮಾನ್ ಮಲಿಕ್ ತಿಳಿಸಿದ್ದಾರೆ.
ನಿಯೋಗ ಯಾವ ಅಧಿಕಾರಿಗಳನ್ನು ಒಳಗೊಳ್ಳಬೇಕು ಎಂಬುದರ ಪರಿಶೀಲನೆ ನಡೆಸಿ, ಭಾರತದ ಹೈಕಮಿಷನರ್ ಶರತ್ ಸಭರ್ವಾಲ್ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಮಲಿಕ್ ಭೇಟಿಯ ದಿನಾಂಕವನ್ನು ಘೋಷಿಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ.