ನವದೆಹಲಿ (ಪಿಟಿಐ): ಬಿಎಸ್ಪಿ ಮುಖಂಡ ದೀಪಕ್ ಭಾರದ್ವಾಜ್ ಹತ್ಯೆಗೆ ಸಂಬಂಧಿಸಿದಂತೆ ಅವರ ಪುತ್ರ ನಿತೀಶ್ ಮತ್ತು ವಕೀಲ ಬಲಜೀತ್ ಸಿಂಗ್ ಅವರನ್ನು ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಇನ್ನೂ ನಾಲ್ಕು ದಿನಗಳ ಕಾಲ ತಮ್ಮ ವಶಕ್ಕೆ ಒಪ್ಪಿಸಬೇಕು ಎಂಬ ದೆಹಲಿ ಪೊಲೀಸರ ಮನವಿಯನ್ನು ತಿರಸ್ಕರಿಸಿದ ಮೆಟ್ರೊಪಾಲಿಟನ್ ನ್ಯಾಯಾಧೀಶೆ ಶೀತಲ್ ಚೌಧರಿ ಅವರು, ಇಬ್ಬರೂ ಆರೋಪಿಗಳನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಆದೇಶ ಹೊರಡಿಸಿದರು.