ಬೆಂಗಳೂರು: ಕನ್ನಡ ಸಾಹಿತ್ಯ ಸಂವರ್ಧಕ ಟ್ರಸ್ಟ್ನ 2012ರ ಸಾಲಿನ ಕಾವ್ಯಾನಂದ ಪುರಸ್ಕಾರವು ಭಾಲಚಂದ್ರ ಜಯಶೆಟ್ಟಿ ಅವರ ‘ಶರಣ ಚಿಂತನೆಯ ನೆಲೆಯಲ್ಲಿ’ ಕೃತಿಗೆ ದೊರೆತಿದೆ.
ಕವಿ ಡಾ.ಸಿದ್ದಯ್ಯ ಪುರಾಣಿಕ ಅವರ ಕಾವ್ಯನಾಮವಾದ ಕಾವ್ಯಾನಂದ ಹೆಸರಿನ ಈ ಪುರಸ್ಕಾರವು ₨ 25,000 ನಗದು ಮತ್ತು ಪ್ರಶಸ್ತಿ ಫಲಕ ಒಳಗೊಂಡಿದೆ.
ಫೆಬ್ರುವರಿಯಲ್ಲಿ ಬೆಂಗಳೂರಿನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಟ್ರಸ್ಟ್ ಅಧ್ಯಕ್ಷೆ ವಿಜಯಾ ನಂದೀಶ್ವರ ತಿಳಿಸಿದ್ದಾರೆ.
ಸಂಸ್ಕೃತಿ ಪ್ರಶಸ್ತಿ: ಪ್ರಜಾ ಸಾಂಸ್ಕೃತಿಕ ವೇದಿಕೆ ಮತ್ತು ಕಾವ್ಯಮಂಡಲ ಸಂಸ್ಥೆಗಳು ನೀಡುವ ‘ಪ್ರೊ.ಕಿ.ರಂ.ನಾಗರಾಜ ಸಂಸ್ಕೃತಿ ಪ್ರಶಸ್ತಿ’ಗೆ ಲೇಖಕ ಪ್ರೊ.ಕೆ.ಮರುಳಸಿದ್ದಪ್ಪ ಅವರನ್ನು ಆಯ್ಕೆ ಮಾಡಲಾಗಿದೆ.
ಜನವರಿ 3ರಂದು ಬೆಂಗಳೂರಿನಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.