ಬೆಂಗಳೂರು: ಪಂಡಿತ ಭೀಮಸೇನ ಜೋಷಿ ಅವರ ಸ್ಮರಣೆಗಾಗಿ ಪ್ರತಿವರ್ಷ ಸಂಗೀತ ಕ್ಷೇತ್ರದಲ್ಲಿನ ಸಾಧಕರಿಗೆ ’ಭೀಮಸೇನ ಜೋಷಿ ಸಂಗೀತ ರತ್ನ’ ಪ್ರಶಸ್ತಿ ನೀಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶುಕ್ರವಾರ ವಿಧಾನ ಸಭೆಯಲ್ಲಿ ಪ್ರಕಟಿಸಿದರು.
ಕಳೆದ ಅಧಿವೇಶನದಿಂದ ಈಚೆಗೆ ಅಗಲಿದ ಗಣ್ಯರಿಗೆ ಸಂತಾಪ ಸೂಚಿಸಲು ಸಭಾಧ್ಯಕ್ಷ ಕೆ.ಜಿ.ಬೋಪಯ್ಯ ಮಂಡಿಸಿದ ನಿರ್ಣಯದ ಮೇಲೆ ಮಾತನಾಡುತ್ತ ಅವರು ಈ ವಿಷಯ ತಿಳಿಸಿದರು.
ಪ್ರಶಸ್ತಿ ಮೊತ್ತ ಒಂದು ಲಕ್ಷ ರೂಪಾಯಿ ಆಗಿದ್ದು, ಅರ್ಹರನ್ನು ಗುರುತಿಸುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಅವರು ಹೇಳಿದರು.