ಹಿರಿಯ ಐಎಎಸ್ ಅಧಿಕಾರಿ ನಾರಾಯಣ್ ಸಿಂಗ್ ನೇತೃತ್ವದ ತನಿಖಾ ಸಮಿತಿ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ, ರಾಧಾಕೃಷ್ಣನ್ ಅವರು ನಿಯಮಗಳನ್ನು ಉಲ್ಲಂಘಿಸಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ ಎಂದು ತಿಳಿಸಿದೆ. 300ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಖಾಸಗಿ ವ್ಯಕ್ತಿಗಳು ಹಾಗೂ ಕೈಗಾರಿಕೆಗಳು ಬುಡಕಟ್ಟು ಜನರ ಭೂಮಿಯನ್ನು ಅಕ್ರಮವಾಗಿ ಖರೀದಿಸಲು ಅವರು ಅನುವು ಮಾಡಿಕೊಟ್ಟಿದ್ದಾರೆ ಎಂದು ಹೇಳಿದೆ.