ನವದೆಹಲಿ (ಪಿಟಿಐ): ಚೀನಾದಿಂದ ಪದೇಪದೇ ದಾಳಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಡಿಯಲ್ಲಿ ಭದ್ರತಾ ಪರಿಸ್ಥಿತಿಯ ಮಾಹಿತಿ ಪಡೆಯಲು ಭೂಸೇನೆಯ ಮುಖ್ಯಸ್ಥ ವಿಕ್ರಮ್ ಸಿಂಗ್ ಲಡಾಖ್ಗೆ ಶನಿವಾರ ಭೇಟಿ ನೀಡಿದ್ದರು.
ಈ ಭೇಟಿಯ ವೇಳೆ ಸಿಂಗ್ ಲಡಾಖ್ ವಲಯದಲ್ಲಿ ನಿಯೋಜಿಸಲಾಗಿರುವ ಭದ್ರತಾ ಪರಿಸ್ಥಿತಿಯ ಕುರಿತು ಮಾಹಿತಿ ಪಡೆದರು ಎಂದು ಸೇನೆಯ ಅಧಿಕಾರಿಗಳು ತಿಳಿಸಿದ್ದಾರೆ.
ಗಡಿಯಲ್ಲಿ ಮೂಲಸೌಕರ್ಯಗಳನ್ನು ಪರಿಶೀಲಿಸಲು ರಾಷ್ಟ್ರೀಯ ಭದ್ರತಾ ಸಲಹಾ ಮಂಡಳಿಯ ಅಧ್ಯಕ್ಷ ಶ್ಯಾಮ್ ಶರಣ್ ನೇತೃತ್ವದ ನಿಯೋಗ ಇತ್ತೀಚೆಗಷ್ಟೇ ಲಡಾಖ್ಗೆ ಭೇಟಿ ನೀಡಿತ್ತು. ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ ಸೃಷ್ಟಿಯಾಗುವುದನ್ನು ತಪ್ಪಿಸುವ ಕುರಿತು ಪರಿಹಾರ ಸೂತ್ರ ಕಂಡು ಹಿಡಿಯಲು ಎರಡೂ ದೇಶಗಳು ಮಾತುಕತೆ ನಡೆಸುತ್ತಿವೆ.