ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೂಸ್ವಾಧೀನಕ್ಕೆ ಮಾಲೀಕರ ಒಪ್ಪಿಗೆ ಪಡೆಯುವುದು ಅಗತ್ಯ

Last Updated 16 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಹಲವು ದಿನಗಳಿಂದ ನೆನೆಗುದಿಯಲ್ಲಿ ಇದ್ದ ವಿವಾದಾತ್ಮಕ ಭೂಸ್ವಾಧೀನ ಮಸೂದೆಗೆ ಸಚಿವರ ಸಮಿತಿ ಒಪ್ಪಿಗೆ ನೀಡಿದ್ದು, ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಈ ಮಸೂದೆಯನ್ನು ಮಂಡಿಸಲು ವೇದಿಕೆ ಸಿದ್ಧವಾದಂತಿದೆ.

ಸರ್ಕಾರಿ, ಖಾಸಗಿ ಸಹಭಾಗಿತ್ವದ ಅಥವಾ ಖಾಸಗಿ ಯೋಜನೆಗಳಿಗೆ ಭೂಮಿ ಸ್ವಾಧೀನಪಡಿಸಿಕೊಳ್ಳುವಾಗ ಮೂರನೇ ಎರಡರಷ್ಟು ಭಾಗದ ಭೂಮಾಲೀಕರ ಒಪ್ಪಿಗೆ ಅಗತ್ಯವಾಗಿದೆ ಎಂದು ಕರಡು ಮಸೂದೆಯಲ್ಲಿ ಹೇಳಲಾಗಿದೆ.

ಈ ಮಸೂದೆ ಕಾಯ್ದೆಯಾದಾಗ ಅದನ್ನು ಪೂರ್ವಾನ್ವಯವಾಗುವಂತೆ ಜಾರಿಗೊಳಿಸುವುದಿಲ್ಲ. ಅದರ ಬದಲಿಗೆ ಕಾಯ್ದೆ ಜಾರಿಗೊಳಿಸಲು ನಿರ್ದಿಷ್ಟ ಕಾಲಮಿತಿ ವಿಧಿಸಲಾಗುವುದು ಎಂದು ಮೂಲಗಳು ತಿಳಿಸಿವೆ. ಈ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವರ ಗುಂಪಿನಲ್ಲಿ ಹಲವು ಭಿನ್ನಾಭಿಪ್ರಾಯಗಳು ಇದ್ದವು. ಕೆಲ ಸಚಿವರು ಕಾಯ್ದೆ ಪೂರ್ವಾನ್ವಯವಾಗುವಂತೆ ಜಾರಿಯಾಗುವುದನ್ನು ವಿರೋಧಿಸಿದ್ದರು. ಮತ್ತೆ ಕೆಲ ಸಚಿವರು ಭೂಸ್ವಾಧೀನಕ್ಕೆ ಭೂಮಾಲೀಕರು ಹಾಗೂ ಆ ಜಮೀನನ್ನು ಜೀವನೋಪಾಯಕ್ಕಾಗಿ ಅವಲಂಬಿಸಿದ ಶೇ 80ರಷ್ಟು ಜನರ ಒಪ್ಪಿಗೆ ಬೇಕು ಎಂಬ ಅಂಶವನ್ನು ವಿರೋಧಿಸಿದ್ದರು.

ಮಸೂದೆ ಮಂಡಿಸಲು ಇರುವ ಅಡೆತಡೆಗಳೆಲ್ಲ ಈಗ ನಿವಾರಣೆಯಾಗಿವೆ. ಈ ಸಂಬಂಧ ಇರುವ ಭಿನ್ನಾಭಿಪ್ರಾಯಗಳನ್ನು ನಿವಾರಿಸಿದ್ದೇವೆ. ಕರಡು ಮಸೂದೆ ಅಂತಿಮಗೊಳಿಸಿದ್ದೇವೆ ಎಂದು ಸಚಿವರ ಸಮಿತಿಯ ಮುಖ್ಯಸ್ಥರಾದ ಶರದ್ ಪವಾರ್ ಮಂಗಳವಾರ ಸಭೆಯ ನಂತರ ತಿಳಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT