ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಭೈರಪ್ಪ ಜ್ಞಾನಪೀಠಕ್ಕೆ ಅರ್ಹರಲ್ಲ: ಬರಗೂರು

Last Updated 11 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ತುಮಕೂರು: ಜ್ಞಾನಪೀಠ ಸಾಹಿತ್ಯದ ಮೌಲ್ಯಕ್ಕೆ ದಕ್ಕುವಂತಹದ್ದು. ಸಾಹಿತ್ಯದ ಸೈದ್ಧಾಂತಿಕ ನಿಲುವುಗಳಿಗೆ ದಕ್ಕುವುದಾದರೆ ಎಸ್.ಎಲ್.ಭೈರಪ್ಪ ಅವರಿಗೆ ಪ್ರಶಸ್ತಿ ಸಿಗಬೇಕು ಎಂಬುದನ್ನು ಒಪ್ಪುವುದಿಲ್ಲ ಎಂದು ಬಂಡಾಯ ಸಾಹಿತಿ ಬರಗೂರು ರಾಮಚಂದ್ರಪ್ಪ ಹೇಳಿದರು.

ನಗರದಲ್ಲಿ ಮಂಗಳವಾರ ನಡೆದ ವಾಲ್ಮೀಕಿ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವುದಕ್ಕೂ ಮುನ್ನ ತಮ್ಮನ್ನು ಭೇಟಿಯಾದ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಹಿತ್ಯದ ಟೀಕೆ, ವಿಮರ್ಶೆಗಳು ಎಂದಿಗೂ ಗಂಭೀರವಾಗಿಯೇ ಇರಬೇಕು. ಅದು ಹಗುರವಾಗಬಾರದು ಎಂದರು.

ಕಂಬಾರರಿಗೆ ಜ್ಞಾನ ಪೀಠ ಪ್ರಶಸ್ತಿ ಸಿಕ್ಕಿರುವುದಕ್ಕೆ ಅಪಸ್ವರ ಸಲ್ಲದು. ಮುಖ್ಯವಾಗಿ ಜ್ಞಾನಪೀಠ ಕನ್ನಡ ಸಾಹಿತ್ಯಕ್ಕೆ ದೊರಕಿರುವುದು ಸಂತಸದ ಸಂಗತಿ. ಕಂಬಾರರು ನವ್ಯಕಾವ್ಯದಲ್ಲಿ ವಿಭಿನ್ನ ಕೃಷಿ ಮಾಡಿ, ಅದಕ್ಕೆ ಜನಪದ ಸ್ಪರ್ಶ ನೀಡಿದವರು ಎಂದು ಬಣ್ಣಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT