ನವದೆಹಲಿ (ಪಿಟಿಐ): ಭೋಪಾಲ್ ಅನಿಲ ದುರಂತದಲ್ಲಿ ನೀಡಿದ ಪರಿಹಾರ ಕಡಿಮೆ, ಅದನ್ನು ಹೆಚ್ಚಿಸಬೇಕೆಂಬ ಮನವಿಯ ಪ್ರಕರಣವನ್ನು ಸೋಮವಾರ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್, ಪ್ರಕರಣದಲ್ಲಿ ಆಪಾದಿತರಾಗಿರುವ ಬಹುರಾಷ್ಟ್ರೀಯ ಕಂಪೆನಿಗಳಿಗೆ ನೋಟಿಸ್ ಜಾರಿಗೊಳಿಸಿದೆ.
ಕೆಳನ್ಯಾಯಾಲಯ ಭೋಪಾಲ್ ಅನಿಲ ದುರಂತದಲ್ಲಿ ಮಡಿದವರಿಗೆ ಹೆಚ್ಚಿನ ಪರಿಹಾರ ನೀಡಬೇಕಿತ್ತೆಂಬ ಸಾರ್ವಜನಿಕರ ಒತ್ತಡದ ಹಿನ್ನೆಲೆಯಲ್ಲಿ 1989 ಮತ್ತು 1991ರ ಸಾಲಿನಲ್ಲಿ ಪ್ರಕಟಗೊಂಡ ಸಂಬಂಧಿತ ನ್ಯಾಯಾಲಯಗಳ ತೀರ್ಪುಗಳನ್ನು ಸರಿಪಡಿಸುವ ಕ್ರಮವಾಗಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ನ ಮೊರೆಹೋಗಿತ್ತು.