ರಾಜರಾಜೇಶ್ವರಿನಗರ: ಹಣಕ್ಕಾಗಿ ಹೆಣ್ಣು ಭ್ರೂಣ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದ್ದು, ಈ ಬಗ್ಗೆ ಕಾನೂನಿನ ಅರಿವು ಮೂಡಬೇಕಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಕಾನೂನು ಸಲಹೆಗಾರರಾದ ರಾಜೇಶ್ವರಿ ತಿಳಿಸಿದರು.
ಬೆಂಗಳೂರು ದಕ್ಷಿಣ ತಾಲ್ಲೂಕು ಆರೋಗ್ಯ ಇಲಾಖೆ ವತಿಯಿಂದ ಹಮ್ಮಿ ಕೊಂಡಿದ್ದ ‘ಪ್ರಸವಪೂರ್ವ ಭ್ರೂಣಲಿಂಗ ಪತ್ತೆಹಚ್ಚುವ ತಂತ್ರಜ್ಞಾನ ದುರ್ಬಳಕೆ ನಿಷೇಧ ಕಾಯ್ದೆ’ ಕುರಿತ ಕಾರ್ಯಾಗಾರದಲ್ಲಿ ಮಾತನಾಡಿದರು.