ಬೆಂಗಳೂರು: ಜುಲೈ 26ಕ್ಕೆ ಕಾರ್ಗಿಲ್ ಯುದ್ಧ ನಡೆದು ಹದಿನಾಲ್ಕು ವರ್ಷಗಳಾಗುತ್ತಿರುವ ಹಿನ್ನೆಲೆಯಲ್ಲಿ ಯುದ್ಧದಲ್ಲಿ ಮಡಿದ ಯೋಧರ ಸ್ಮರಣಾರ್ಥ `ದಿ ಫ್ಲ್ಯಾಗ್ಸ್ ಆಫ್ ಹಾನರ್ ಫೌಂಡೇಷನ್' ಶುಕ್ರವಾರ ನಗರದ ಬಾಲಭವನದಲ್ಲಿ ಚಿತ್ರಕಲಾ ಸ್ಪರ್ಧೆ ಏರ್ಪಡಿಸಿತ್ತು.
ನಗರದ ವಿವಿಧ ಶಾಲೆಗಳಿಂದ ಬಂದಿದ್ದ 40ಕ್ಕೂ ಹೆಚ್ಚು ಮಕ್ಕಳು ದೇಶದ ಗಡಿಗಳಲ್ಲಿ ರಕ್ಷಣೆಗಾಗಿ ನಿಂತಿರುವ ಯೋಧರು, ಭೂಸೇನೆ, ವಾಯುಸೇನೆ, ನೌಕಾಸೇನೆಯಲ್ಲಿ ಯುದ್ಧಕ್ಕೆ ಬಳಸುವ ಉಪಕರಣಗಳು, ತಮ್ಮ ಪ್ರಾಣವನ್ನೂ ಮುಡುಪಾಗಿಟ್ಟು ದೇಶದ ಧ್ವಜವನ್ನು ಎತ್ತಿಹಿಡಿಯುತ್ತಿರುವ ಯೋಧರು...ಬಗೆ ಬಗೆ ಚಿತ್ತಾರಗಳನ್ನು ಬಣ್ಣಗಳಲ್ಲಿ ಮೂಡಿಸಿದರು.