ಸಮನ್ವಯಾಧಿಕಾರಿ ಎಚ್.ಎಂ ಪಡ್ನೇಶಿ ಪ್ರಾಸ್ತಾವಿಕವಾಗಿ ಮಾತನಾಡಿ, ಸರ್ವಶಿಕ್ಷಣ ಅಭಿಯಾನದ ಆಶಯಗಳನ್ನು ವಿವರಿಸಿದರು. ಪ್ರಾಚಾರ್ಯ ಎಂ.ಎ ನದಾಪ್, ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಎಂ ಮಾಳಗಿಮನಿ, ದೈಹಿಕ ಶಿಕ್ಷಕ ಶಂಬಣ್ಣ ಕೋರಿ, ಶಿಕ್ಷಕರ ಸಂಘದ ಅಧ್ಯಕ್ಷ ಪಿ.ಆರ್ ನವಲೆ, ಪ್ರಾಥಮಿಕ ಶಿಕ್ಷಕರ ಸಂಘದ ಪ್ರಧಾನ ಕಾರ್ಯದರ್ಶಿ ಆರ್.ಎಸ್ ಈಳಗೇರ, ಪ್ರೌಢಶಾಲಾ ಶಿಕ್ಷಕರ ಸಂಘದ ಕಾರ್ಯದರ್ಶಿ ಮಲ್ಲಿಕಾರ್ಜುನ ಶಾಂತಗಿರಿ, ಶಿಕ್ಷಣ ಸಂಯೋಜಕ ಎಲ್.ಆರ್ ದಾಸರ ನಿವೃತ್ತ ಶಿಕ್ಷಕರಾದ ಸಿ.ಜಿ ಚೂರಿ ಉಪಸ್ಥಿತರಿದ್ದರು.