ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಭಾವನೆಗಳನ್ನು ಚಿವುಟದಿರಿ-: ಆಶಾ

Last Updated 6 ಡಿಸೆಂಬರ್ 2013, 11:29 IST
ಅಕ್ಷರ ಗಾತ್ರ

ಸುಳ್ಯ: ಮಕ್ಕಳ ಭಾವನೆಗಳನ್ನು ಚಿವುಟಬಾರದು. ಮಕ್ಕಳ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಿ ಅವರ ಪ್ರತಿಭೆಯನ್ನು ಬೆಳಗಿಸುವ ಕಾರ್ಯ ಮಾಡ­ಬೇಕಿದೆ. ಮಕ್ಕಳ ಭಾವನೆಗಳನ್ನು ಗೌರವಿಸಿ ಅವರ ಕನಸು ನನಸು ಮಾಡುವ ಕೆಲಸ ಮಾಡಬೇಕೆಂದು ಜಿ.ಪಂ. ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷೆ ಆಶಾ ತಿಮ್ಮಪ್ಪ ಹೇಳಿ­ದ್ದಾರೆ.

ಬೆಳ್ಳಾರೆ ಸರ್ಕಾರಿ ಸಂಯುಕ್ತ ಪದವಿ ಪೂರ್ವ ಕಾಲೆಜಿನಲ್ಲಿ ನಡೆದ ಸುಳ್ಯ ತಾಲ್ಲೂಕು ಮಟ್ಟದ ಪ್ರತಿಭಾ ಕಾರಂಜಿಯನ್ನು ಉದ್ಘಾಟಿಸಿ ಅವರು ಮಾತನಾಡಿದರು.

ಸ್ಪರ್ಧಾ ಕಾರ್ಯಕ್ರಮವನ್ನು ಡೋಲು ಬಾರಿ­ಸು­­ವುದರ ಮೂಲಕ ತಾಲ್ಲೂಕು ಪಂಚಾ­ಯಿತಿ ಸದಸ್ಯ ಅನಿಲ್ ರೈ ಉದ್ಘಾಟಿಸಿ ಶುಭ­ಕೋರಿದರು.

ತಾ.ಪಂ. ಅಧ್ಯಕ್ಷ ಗುಣವತಿ ಕೊಲ್ಲಂತಡ್ಕ ಅಧ್ಯಕ್ಷತೆ ವಹಿಸಿದ್ದರು. ಗ್ರಾ.ಪಂ. ಅಧ್ಯಕ್ಷ ವಿಠಲ ದಾಸ್, ಪದವಿ ಪೂರ್ವ ಕಾಲೇಜು ಪ್ರಾಂಶುಪಾಲ ಯು.­ಸುಬ್ರಾಯ ಗೌಡ, ಕ್ಷೇತ್ರ ಶಿಕ್ಷಣಾಧಿಕಾರಿ ಮಲ್ಲೇ­ಸ್ವಾಮಿ, ರಾಜ್ಯ ಸರ್ಕಾರಿ ನೌಕರರ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಡಾ.ನಂದಕುಮಾರ್ ಅತಿಥಿಗಳಾಗಿದ್ದರು.

ನೋಡೆಲ್ ಅಧಿಕಾರಿ ಪ್ರಕಾಶ್ ಮೂಡಿತ್ತಾ­ಯ, ಪ್ರತಿಭಾ ಕಾರಂಜಿ ಸಮಿತಿ ಅಧ್ಯಕ್ಷ ಪ್ರದೀಪ್ ಕುಮಾರ್ ರೈ ಪನ್ನೆ, ಬೆಳ್ಳಾರೆ ರೋಟರಿ ಕ್ಲಬ್ ಅಧ್ಯಕ್ಷ ಶೈಲೇಶ್ ಕುಮಾರ್, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಶಿವರಾಮ ಅಮಳ ಸೇರಿದಂತೆ ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ­ಯ ಅಧ್ಯಕ್ಷರು ಉಪಸ್ಥಿತರಿದ್ದರು. ಕ್ಷೇತ್ರ ಸಂಪ­ನ್ಮೂಲ ಕೇಂದ್ರದ ಸಮನ್ವಯ ಅಧಿಕಾರಿ ಚಂದ್ರ­ಶೇಖರ ಪೇರಾಲು ಪ್ರಾಸ್ತಾವಿಕ ಮಾತನಾಡಿ­ದರು. ಉಪ ಪ್ರಾಂಶುಪಾಲೆ ಎಂ.ಟಿ.ವೀಣಾ ವಂದಿಸಿ­ದರು. ಶಿಕ್ಷಕ ಮಹಾಬಲ ಕುಳ ನಿರೂಪಿಸಿ­ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT