ದತ್ತು ಪಡೆದುಕೊಂಡಿರುವ 30 ಶಾಲೆಗಳ ಪೈಕಿ, ಪ್ರತಿ ಶಾಲೆಯಲ್ಲಿ ತಲಾ 10ರಿಂದ 20 ವಿದ್ಯಾರ್ಥಿಗಳನ್ನು ಪ್ರತಿ ವರ್ಷ ಉಚಿತವಾಗಿ ದೇಶದ ರಾಜಧಾನಿ ನವದೆಹಲಿಯಲ್ಲಿನ ಪ್ರೇಕ್ಷಣಿಯ ಹಾಗೂ ಐತಿಹಾಸಿಕ ಸ್ಥಳಗಳಿಗೆ ಶೈಕ್ಷಣಿಕ ಪ್ರವಾಸ ಹಮ್ಮಿಕೊಳ್ಳುತ್ತದೆ.
ಪ್ರವಾಸಕ್ಕೆ ಪ್ರತಿಭಾನ್ವಿತ ಮಕ್ಕಳಿಗೆ ಪ್ರವೇಶ ಪರೀಕ್ಷೆ ನಡೆಸುವ ಮೂಲಕ ಆಯ್ಕೆಮಾಡಲಾಗುತ್ತದೆ ಎಂದು ಫೌಂಡೇಷನ್ ಸಂಯೋಜಕ ಚೌಡಪ್ಪ `ಪ್ರಜಾವಾಣಿ'ಗೆ ತಿಳಿಸಿದರು.
ಪ್ರವೇಶ ಪರೀಕ್ಷೆಯಲ್ಲಿ ಆಯ್ಕೆಯಾದ ವಿದ್ಯಾರ್ಥಿಗಳ ಜತೆಗೆ, ಆಯ ಶಾಲೆಯ ಇಬ್ಬರೂ ಶಿಕ್ಷಕರಿಗೂ ಪ್ರವಾಸದಲ್ಲಿ ಪಾಲ್ಗೊಳ್ಳಲು ಅವಕಾಶ ಇದೆ. ಪ್ರವಾಸಕ್ಕೆ ತೆರಳುವ ವಿದ್ಯಾರ್ಥಿಗಳಿಗೂ ಹಾಗೂ ಶಿಕ್ಷಕರಿಗೂ ಯಾವುದೇ ರೀತಿಯ ಶುಲ್ಕ ಪಡೆದುಕೊಳ್ಳುವುದಿಲ್ಲ. ಫೌಂಡೇಷನ್ನ ಶೈಕ್ಷಣಿಕ ಪ್ರವಾಸ ಯೋಜನೆ ಮಕ್ಕಳಲ್ಲಿ ಆಸಕ್ತಿ ಕೆರಳಿಸಿದೆ.
ಪ್ರವೇಶ ಪರೀಕ್ಷಾ ಕೇಂದ್ರಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿ ವೀರಣ್ಣ ಎಸ್.ಜತ್ತಿ ಹಾಗೂ ಕ್ಷೇತ್ರ ಸಮನ್ವಾಯಾಧಿಕಾರಿ ಮಹೇಶ್ ವಿ.ಪೂಜಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.