ಆಮೇಲೆ ಮೂರುಸಾವಿರ ಮಠಕ್ಕೆ ತೆರಳಿ, ಗದ್ದುಗೆ ದರ್ಶನ ಪಡೆದ ಅವರು, ಗುರುಸಿದ್ಧ ರಾಜಯೋಗೀಂದ್ರ ಸ್ವಾಮೀಜಿ ಆಶೀರ್ವಾದವನ್ನೂ ಪಡೆದರು. ಅಲ್ಲಿಂದ ಸಿದ್ಧಾರೂಢ ಮಠಕ್ಕೆ ತೆರಳಿ ಗದ್ದುಗೆ ದರ್ಶನ ಮಾಡಿದರು. ಈ ಮಧ್ಯೆ, ತಮ್ಮ ತಂದೆ ಶಿವಪ್ಪ ಶೆಟ್ಟರ್ ಅವರ ಸಮಾಧಿ ಸ್ಥಳಕ್ಕೆ ತೆರಳಿ ನಮಸ್ಕರಿಸಿ ಬಂದರು. ಅಲ್ಲಿಂದ ನೇರವಾಗಿ ಸರ್ಕ್ಯೂಟ್ ಹೌಸ್ಗೆ ತೆರಳಿ, ಬರ ಪರಿಸ್ಥಿತಿಗೆ ಸಂಬಂಧಿಸಿದಂತೆ ಜಿಲ್ಲೆಯ ಅಧಿಕಾರಿಗಳ ಸಭೆ ನಡೆಸಿದರು. ಸಭೆ ಮುಗಿಸಿದ ತಕ್ಷಣ ಕಿಮ್ಸ ಆವರಣದಲ್ಲಿ ಏರ್ಪಡಿಸಲಾಗಿದ್ದ ಸಮಾರಂಭದಲ್ಲಿ ಪಾಲ್ಗೊಂಡರು. ರಾತ್ರಿ ಹಿರಿಯ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ ಅವರನ್ನು ಭೇಟಿಯಾಗಿ ಆಶೀರ್ವಾದ ಪಡೆದರು.