ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಡೆಸ್ನಾನ ನಿಷೇಧಕ್ಕೆ ಆಗ್ರಹ

Last Updated 6 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬೆಂಗಳೂರು: ‘ಮಡೆ ಮಡೆಸ್ನಾನ ಮತ್ತು ಪಂಕ್ತಿಭೇದ ವಿರೋಧಿಸಿ ಶನಿವಾರ ನಗರ­ದಲ್ಲಿ ಮತ್ತು  ಭಾನುವಾರ ರಾಜ್ಯ­ದಾ­ದ್ಯಂತ ಪ್ರತಿಭಟನೆ  ಹಮ್ಮಿಕೊಳ್ಳ­ಲಾಗಿದೆ’ ಎಂದು ಭಾರತ ಕಮ್ಯೂನಿಸ್ಟ್‌ ಪಕ್ಷದ (ಮಾರ್ಕ್ಸ್‌ವಾದಿ) ರಾಜ್ಯ ಕಾರ್ಯದರ್ಶಿ ಜಿ.ವಿ.ಶ್ರೀರಾಮರೆಡ್ಡಿ ಹೇಳಿದರು.

ಉನ್ನತ ಜಾತಿಯವರು ಊಟ ಮಾಡಿದ ಎಂಜಲು ಎಲೆಗಳ ಮೇಲೆ ಕೆಳ ಜಾತಿಯವರು ಉರುಳಾಡುವ ಅನಿಷ್ಟ ಪದ್ಧತಿಯನ್ನು ಕೂಡಲೆ ನಿಷೇಧಿಸಬೇಕು  ಎಂದು ಶುಕ್ರವಾರ ಪತ್ರಿಕಾಗೋಷ್ಠಿ­ಯಲ್ಲಿ ಒತ್ತಾಯಿಸಿದರು.

ಉಡುಪಿಯ ಶ್ರೀಕೃಷ್ಣಮಠ ಸೇರಿ­ದಂತೆ ಇತರ ಮಠಗಳಲ್ಲಿ ನಡೆಯುತ್ತಿ­ರುವ ಪಂಕ್ತಿ­ಭೇದವು ಜಾತಿ ವ್ಯವಸ್ಥೆಯ ಇನ್ನೊಂದು ಮುಖವಾಗಿದೆ. ಮೇಲ್ಜಾತಿ ಮತ್ತು ಕೆಳಜಾತಿಯವರಿಗೆ ಪ್ರತ್ಯೇಕವಾಗಿ ಊಟ ಹಾಕುವ ಪದ್ಧತಿಯು ಪ್ರಜಾ­ಪ್ರಭುತ್ವ ವಿರೋಧಿ ನೀತಿಯಾಗಿದೆ. ಸರ್ಕಾರ ಕೂಡಲೇ ಇದಕ್ಕೆ ಸುಗ್ರೀವಾಜ್ಞೆ ತಂದು ಮಡೆ ಮಡೆಸ್ನಾನ ಮತ್ತು ಪಂಕ್ತಿ­ಭೇದವನ್ನು ನಿಷೇಧಿಸಬೇಕು ಎಂದರು.

ಪುತ್ತೂರಿನ ಶಾಸಕಿ ಶಕುಂತಳಾ ಶೆಟ್ಟಿ ಅವರು ಇತ್ತೀಚೆಗೆ ಸರ್ಕಾರಕ್ಕೆ ಸಲ್ಲಿಸಿದ ವರದಿಯಲ್ಲಿ ಕಳೆದ 3 ವರ್ಷಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ 350ಕ್ಕೂ ಹೆಚ್ಚು ಮಹಿಳೆಯರು ಕಾಣೆಯಾಗಿ­ದ್ದಾರೆ ಎಂದು ತಿಳಿದು ಬಂದಿದೆ. 1979ರಿಂದ ಈ ವರೆಗೆ ಧರ್ಮಸ್ಥಳ, ಉಜಿರೆ ಸುತ್ತಮುತ್ತ 452 ಅಸಹಜ ಸಾವು ಸಂಭವಿಸಿವೆ. ಸರ್ಕಾರ ಈ ಎಲ್ಲ ಪ್ರಕರಣಗಳ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT