ನವದೆಹಲಿ (ಪಿಟಿಐ): ಕಳೆದ ವರ್ಷದ (2011) ಮಾರ್ಚ್ ತಿಂಗಳಿನಿಂದಲೇ ಸಾರ್ವಜನಿಕರಿಂದ ಠೇವಣಿ ಸ್ವೀಕರಿಸುವುದನ್ನು ಸ್ಥಗಿತಗೊಳಿಸಲಾಗಿದೆ ಎಂದು ಮಣಪ್ಪುರಂ ಫೈನಾನ್ಸ್ ಸ್ಪಷ್ಟಪಡಿಸಿದೆ.
ಈ ಬಗ್ಗೆ ಭಾರತೀಯ ರಿಸರ್ವ್ ಬ್ಯಾಂಕ್ ವ್ಯಕ್ತಪಡಿಸಿರುವ ಕಳವಳಕ್ಕೆ ಸೂಕ್ತ ರೀತಿಯಲ್ಲಿ ಸ್ಪಂದಿಸುವುದಾಗಿಯೂ ಸಂಸ್ಥೆ ತಿಳಿಸಿದೆ. ಠೇವಣಿ ಸ್ವೀಕರಿಸದ ಬ್ಯಾಂಕೇತರ ಹಣಕಾಸು ಸಂಸ್ಥೆಯಾಗಿರುವ (ಎನ್ಬಿಎಫ್ಸಿ) ಮಣಪ್ಪುರಂ ಫೈನಾನ್ಸ್ ಸಂಸ್ಥೆಯು ನಿಯಮ ಉಲ್ಲಂಘಿಸಿ ಸಾರ್ವಜನಿಕರಿಂದ ಠೇವಣಿ ಸ್ವೀಕರಿಸುತ್ತಿದೆ. ಇದು ಶಿಕ್ಷಾರ್ಹ ಅಪರಾಧ ಎಂದು `ಆರ್ಬಿಐ~ ಕಳೆದ ವಾರ ಎಚ್ಚರಿಕೆ ನೀಡಿತ್ತು.
ಕೇಂದ್ರೀಯ ಬ್ಯಾಂಕ್ನ ಎಚ್ಚರಿಕೆ ಹಿನ್ನೆಲೆಯಲ್ಲಿ ಫೆ. 10ರಂದು ಸಭೆ ಸೇರಿ ಚರ್ಚಿಸಿದ ಸಂಸ್ಥೆಯ ಆಡಳಿತ ಮಂಡಳಿಯು ಈ ಸ್ಪಷ್ಟನೆ ನೀಡಿದೆ.