ತುರ್ತು ಪರಿಸ್ಥಿತಿ ನಂತರ 1977ರಲ್ಲಿ ನಡೆದ ಲೋಕಸಭೆ ಚುನಾವಣೆಯಲ್ಲಿ ತರಾತುರಿಯಲ್ಲಿ ರೂಪುಗೊಂಡ ಜನತಾ ಮೈತ್ರಿಕೂಟ 298 ಸ್ಥಾನಗಳನ್ನು ಪಡೆದುಕೊಂಡಿತು. ಸ್ವಾತಂತ್ರ್ಯಾನಂತರ ಮೊದಲ ಬಾರಿ ಕಾಂಗ್ರೆಸ್ ಅಧಿಕಾರ ಕಳೆದುಕೊಂಡರೆ ಪ್ರಧಾನಿ ಇಂದಿರಾ ಗಾಂಧಿ ಮತ್ತು ಅವರ ಪುತ್ರ ಸಂಜಯ ಗಾಂಧಿ ತಮ್ಮ ಕ್ಷೇತ್ರಗಳಲ್ಲಿ ಸೋಲುಂಡರು.