ಮುಕ್ತ ಹಾಗೂ ನ್ಯಾಯಸಮ್ಮತ ಚುನಾವಣೆ ಯಲ್ಲಿ ಎಲ್ಲರೂ ಪಾಲ್ಗೊಳ್ಳಬೇಕು. ಪ್ರತಿಯೊಬ್ಬರೂ ಮತದಾನದ ಮಹತ್ವ ಅರಿತುಕೊಳ್ಳುವುದರ ಜೊತೆಗೆ ಇತರರಿಗೂ ಮಾರ್ಗದರ್ಶನ ನೀಡಿ, ಮತದಾನಕ್ಕೆ ಪ್ರೋತ್ಸಾಹಿಸಬೇಕೆಂದರು. ಪ್ರಾಥಮಿಕದಿಂದ ಪ್ರೌಢಶಾಲಾ ಹಂತದವರೆಗೆ ಓದುತ್ತಿರುವ ಜಿಲ್ಲೆಯ ಎಲ್ಲ ಶಾಲೆಗಳ 1,89,600 ಮಕ್ಕಳ ಮೂಲಕ ಪೋಷಕರಿಗೆ ಮತದಾನದ ಬಗ್ಗೆ ಅರಿವು ಮೂಡಿಸಲು ವಿಶಿಷ್ಟ ರೀತಿಯ ಪತ್ರ ಅಭಿಯಾನ ಆರಂಭಿಸಲು ಉದ್ದೇಶಿಸಲಾಗಿದೆ.