ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮತ್ಸ್ಯಮೇಳ

Last Updated 16 ಫೆಬ್ರುವರಿ 2011, 19:30 IST
ಅಕ್ಷರ ಗಾತ್ರ

ಮೀನು ಅಂದರೆ ಯಾರಿಗೆ ಇಷ್ಟವಿಲ್ಲ ಹೇಳಿ ? ಮೀನಿನ ಖಾದ್ಯಗಳು ದೊಡ್ಡವರ ಬಾಯಲ್ಲಿ ನೀರೂರಿಸಿದರೆ, ಅಕ್ವೇರಿಯಂನಲ್ಲಿ ಈಜಾಡುವ ಬಣ್ಣದ ಮೀನುಗಳೆಂದರೆ ಮಕ್ಕಳಿಗೆ ಪಂಚಪ್ರಾಣ.

ರಾಜ್ಯ ಮೀನುಗಾರಿಕೆ ಇಲಾಖೆ ಮತ್ತು ರಾಷ್ಟ್ರೀಯ  ಮೀನುಗಾರಿಕೆ ಅಭಿವೃದ್ದಿ ಮಂಡಳಿ ಶುಕ್ರವಾರದಿಂದ ಸೋಮವಾರದವರೆಗೆ ನಗರದಲ್ಲಿ ಏರ್ಪಡಿಸಿರುವ ಮತ್ಸ್ಯಮೇಳ  ಎಲ್ಲರಿಗೂ ಪ್ರಿಯವಾಗುವಂತಿದೆ.

ಈ  ಮತ್ಸ್ಯಮೇಳ ಸಾಮಾನ್ಯರಿಗೆ ಮೀನುಗಾರಿಕೆ ಮತ್ತು ಮೀನು ಕೃಷಿಗೆ ಸಂಬಂಧಿಸಿದ ವಿವಿಧ ವಿಷಯಗಳನ್ನು ಪರಿಚಯಿಸುವುದರ ಜೊತೆಗೆ ರೈತರಿಗೆ, ಖಾಸಗಿ ಕಂಪನಿಗಳಿಗೆ, ವಿಜ್ಞಾನಿಗಳಿಗೆ ಜ್ಞಾನ ವಿನಿಮಯದ ವೇದಿಕೆಯಾಗಲಿದೆ.

ಶುಕ್ರವಾರ ಬೆಳಿಗ್ಗೆ 11ಕ್ಕೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಂದ ಉದ್ಘಾಟನೆ, ಅತಿಥಿಗಳು: ಸಚಿವರಾದ ಜೆ.ಕೃಷ್ಣ ಪಾಲೇಮಾರ್, ಆರ್.ಅಶೋಕ್, ವಿಶ್ವೇಶ್ವರ ಹೆಗಡೆ ಕಾಗೇರಿ, ಡಾ. ವಿ.ಎಸ್. ಆಚಾರ್ಯ, ಬಿ. ಎನ್. ಬಚ್ಚೇಗೌಡ, ಶಾಸಕ ಡಾ. ಸಿ. ಎನ್. ಅಶ್ವಥನಾರಾಯಣ, ಮೇಯರ್ ಎಸ್.ಕೆ.ನಟರಾಜ್

ಸ್ಥಳ: ತ್ರಿಪುರವಾಸಿನಿ, ಅರಮನೆ ಮೈದಾನ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT