ಬೆಂಗಳೂರು: ನಗರದಲ್ಲಿ 2008ರಲ್ಲಿ ಸಂಭವಿಸಿದ್ದ ಸರಣಿ ಬಾಂಬ್ ಸ್ಫೋಟ ಪ್ರಕರಣದ ಆರೋಪಿ ಪಿಡಿಪಿ ನಾಯಕ ಅಬ್ದುಲ್ ನಾಸರ್ ಮದನಿಯನ್ನು ಆತನ ಕುಟುಂಬ ಸದಸ್ಯರು ಮಂಗಳವಾರ ಮಧ್ಯಾಹ್ನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಭೇಟಿ ಮಾಡಿ ಮಾತುಕತೆ ನಡೆಸಿದರು.
`ಮದನಿಯ ಪತ್ನಿ ಸೂಫಿಯಾ, ಮಗಳು ಸೇರಿದಂತೆ ಒಟ್ಟು ಐದು ಮಂದಿ ಆತನನ್ನು ಜೈಲಿನ ಸಂದರ್ಶಕರ ಕೊಠಡಿಯಲ್ಲಿ ಭೇಟಿ ಮಾಡಿದ್ದರು. ಮಧ್ಯಾಹ್ನ ಎರಡು ಗಂಟೆ ಸುಮಾರಿಗೆ ಕಾರಾಗೃಹಕ್ಕೆ ಬಂದಿದ್ದ ಕುಟುಂಬ ಸದಸ್ಯರು 30 ನಿಮಿಷಗಳ ಕಾಲ ಮದನಿ ಜತೆ ಮಾತುಕತೆ ನಡೆಸಿದರು~ ಎಂದು ಕಾರಾಗೃಹದ ಹಿರಿಯ ಅಧಿಕಾರಿಗಳು `ಪ್ರಜಾವಾಣಿ~ಗೆ ತಿಳಿಸಿದರು.