ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮದುರೆಯಲ್ಲಿ ರಾಜ್ಯೋತ್ಸವ

Last Updated 2 ಡಿಸೆಂಬರ್ 2012, 20:54 IST
ಅಕ್ಷರ ಗಾತ್ರ

ಮದುರೆ: ಇಲ್ಲಿನ ಕರ್ನಾಟಕ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವ ಮತ್ತು ಮಕ್ಕಳ ದಿನಾಚರಣೆಯನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಇಲ್ಲಿನ `ಸೇತುಪತಿ' ಶಾಲೆ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಟೋಟ ಸ್ಪರ್ಧೆಯ ಉದ್ಘಾಟನೆಯನ್ನು ಸಂಘದ ಅಧ್ಯಕ್ಷ ಡಾ. ಮೋಹನ್ ನೆರವೇರಿಸಿದರು. ಮಧ್ಯಾಹ್ನ ರಂಗೋಲಿ, ಚಿತ್ರಕಲೆ, ಛದ್ಮವೇಶ, ಭಾವಗೀತೆ ಸ್ಪರ್ಧೆ ನಡೆಸಲಾಯಿತು.

ಸಂಜೆ ನಡೆದ ಕಾರ್ಯಕ್ರಮದಲ್ಲಿ ಬಹುಮಾನ ವಿತರಿಸಿದ `ಇರ್ಕಾನ್' ಪ್ರಧಾನ ವ್ಯವಸ್ಥಾಪಕ ಎಚ್.ಡಿ.ದೊಡ್ಡಯ್ಯ, ಹೊರನಾಡ ಕನ್ನಡಿಗರು ರಾಜ್ಯೋತ್ಸವ ಆಚರಿಸುವ ಅವಶ್ಯಕತೆ ವಿವರಿಸಿದರು. ಸಂಘದ ಯೋಜಿತ ಕಟ್ಟಡ ನಿರ್ಮಾಣ ಪೂರ್ಣಗೊಳಿಸಲು ಎಲ್ಲರ ನೆರವು ಅಗತ್ಯ ಎಂದರು.

ಡಾ. ಮೋಹನ್ ಅವರು ಕನ್ನಡ-ಸಂಸ್ಕೃತಿ ಇಲಾಖೆ ಮತ್ತು ಕರ್ನಾಟಕ ಸರ್ಕಾರದ ನೆರವಿಲ್ಲದೆ ಸಂಘದ ಕಟ್ಟಡ ನಿರ್ಮಾಣ ಕೆಲಸ ಪೂರ್ಣಗೊಳಿಸುವುದು ಅಸಾಧ್ಯ ಎಂದರು. ಖಜಾಂಚಿ ಕಲ್ಮಡ್ಕ ಕೃಷ್ಣ ಉಪಸ್ಥಿ      ತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT