ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಧ್ಯರಾತ್ರಿ ಕಾರ್ಯಾಚರಣೆ: ದೆಹಲಿ ಪೊಲೀಸರ ಸಮರ್ಥನೆ

Last Updated 17 ಜೂನ್ 2011, 10:05 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ನಗರದ ರಾಮಲೀಲಾ ಮೈದಾನದಲ್ಲಿ ಭ್ರಷ್ಟಾಚಾರ ಮತ್ತು ಕಪ್ಪು ಹಣದ ವಿರುದ್ಧ ಪ್ರತಿಭಟನೆ ನಿರತರಾಗಿದ್ದ ಯೋಗ ಗುರು ಬಾಬಾ ರಾಮದೇವ್ ಮತ್ತು ಅವರ ಬೆಂಬಲಿಗರ ಮೇಲೆ ನಡೆಸಲಾದ ಮಧ್ಯರಾತ್ರಿಯ ಕಾರ್ಯಾಚರಣೆಯನ್ನು ದೆಹಲಿ ಪೊಲೀಸರು ಶುಕ್ರವಾರ ಸುಪ್ರೀಕೋರ್ಟ್ ನಲ್ಲಿ ಸಮರ್ಥಿಸಿಕೊಂಡರು.

ನ್ಯಾಯಾಲಯಕ್ಕೆ ಸಲ್ಲಿಸಲಾದ ಪ್ರಮಾಣಪತ್ರದಲ್ಲಿ ~ಯೋಗ ಶಿಬಿರಕ್ಕೆ ಅವಕಾಶ ನೀಡಲಾಗಿತ್ತೇ ಹೊರತು ಬೇರಾವುದೇ ಉದ್ದೇಶದ ಸಮಾವೇಶಕ್ಕೆ ಅವಕಾಶ ನೀಡಲಾಗಿರಲಿಲ್ಲ~ ಎಂದು ಪೊಲೀಸರು  ಪ್ರತಿಪಾದಿಸಿದರು.

~5000 ಜನರಿಗೆ ಸಮಾವೇಶಗೊಳ್ಳಲು ಮಾತ್ರವೇ ಅವಕಾಶ ನೀಡಲಾಗಿತ್ತು. ಆದರೆ ಕಾರ್ಯಾಚರಣೆ ನಡೆದ ಜೂನ್ 4 ಮತ್ತು 5 ರ ನಡುವಣ ರಾತ್ರಿಯಲ್ಲಿ 20,000ಕ್ಕೂ ಹೆಚ್ಚು ಜನ ರಾಮಲೀಲಾ ಮೈದಾನದಲ್ಲಿ ಜಮಾಯಿಸಿದ್ದರು~ ಎಂದೂ ಪ್ರಮಾಣ ಪತ್ರ ಹೇಳಿತು.

ರಾಮದೇವ್ ಬೆಂಬಲಿಗರು ಪೊಲೀಸ್ ಸಿಬ್ಬಂದಿಯತ್ತ ಕಲ್ಲು ತೂರಾಟ ಆರಂಭಿಸಿದ ಬಳಿಕವೇ ಆಶ್ರುವಾಯು ಪ್ರಯೋಗಿಸಲಾಯಿತು ಎಂದೂ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.

ಮಧ್ಯರಾತ್ರಿ ಕಾರ್ಯಾಚರಣೆಯನ್ನು ತಾನಾಗಿಯೇ ಗಮನಿಸಿದ ಸುಪ್ರೀಂಕೋರ್ಟ್ ಸ್ವ-ಇಚ್ಛೆಯ ನೋಟಿಸ್ ಜಾರಿ ಮಾಡಿದ್ದನ್ನು ಅನುಸರಿಸಿ ಪೊಲೀಸರು ನ್ಯಾಯಾಲಯಕ್ಕೆ ಈ ಸಮರ್ಥನೆಯನ್ನು ಸಲ್ಲಿಸಿದ್ದಾರೆ.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT