ತಲಘಟ್ಟಪುರ: ಕಗ್ಗಲೀಪುರ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಮನೆಯಿಲ್ಲದ ಕಡುಬಡವರನ್ನು ಗುರುತಿಸಿ ಪಟ್ಟಿಯನ್ನು ನೀಡಿದರೆ ಮನೆಯನ್ನು ನಿರ್ಮಿಸಿ ಕೊಡುವುದಾಗಿ ಆರ್ಟ್ ಆಫ್ ಲಿವಿಂಗ್ ಸಂಸ್ಥಾಪಕ ಶ್ರೀ ಶ್ರೀ ರವಿಶಂಕರ್ ತಿಳಿಸಿದರು.
ಕನಕಪುರ ರಸ್ತೆಯ ಆರ್ಟ್ ಆಫ್ ಲಿವಿಂಗ್ ಸಂಸ್ಥೆಯಲ್ಲಿ ಈಚೆಗೆ ನಡೆದ ಜನಪ್ರತಿನಿಧಿಗಳ ಸಭೆಯಲ್ಲಿ ಅವರು ಮಾತನಾಡಿದರು. ಜಿಲ್ಲಾ ಪಂಚಾಯತಿ ಸದಸ್ಯೆ ಮಂಜುಳ ಅಶ್ವತ್ಥ ನಾಯ್ಕ, ತಾಲ್ಲೂಕು ಪಂಚಾಯತಿ ಸದಸ್ಯೆ ಎಲ್ಲಮ್ಮ ನಾರಾಯಣ ಸ್ವಾಮಿ, ಗ್ರಾ.ಪಂ.ಅಧ್ಯಕ್ಷೆ ಮಂಜುಳ ಶಾಮ್, ತಾಲ್ಲೂಕು ಕೃಷಿಕ ಸಮಾಜದ ಅಧ್ಯಕ್ಷ ಮಹದೇವ್ ಹಾಜರಿದ್ದರು.