ಬೆಂಗಳೂರು: ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಗೆ ಈ ವರ್ಷ 34.30 ಕೋಟಿ ಅನುದಾನ ಹಂಚಿಕೆಯಾಗಿದೆ ಎಂದು ಯೋಜನಾ ಸಚಿವ ಎಸ್.ಆರ್.ಪಾಟೀಲ ಹೇಳಿದರು.
ಬುಧವಾರ ವಿಧಾನಸೌಧದಲ್ಲಿ ನಡೆದ ಮಂಡಳಿಯ ಸರ್ವ ಸದಸ್ಯರ ಸಭೆಯಲ್ಲಿ 2013-14ನೇ ಸಾಲಿನ ಕ್ರಿಯಾ ಯೋಜನೆಗೆ ಒಪ್ಪಿಗೆ ನೀಡಲಾಗಿದ್ದು, ಹಿಂದೆ ಬಳಕೆಯಾಗದೆ ಇರುವ 12.83 ಕೋಟಿ ಅನುದಾನವನ್ನು ಈ ವರ್ಷ ಬಳಸಿಕೊಳ್ಳಲಾಗುವುದು ಎಂದು ತಿಳಿಸಿದರು.
ಡಾ.ಡಿ.ಎಂ.ನಂಜುಂಡಪ್ಪ ವರದಿ ಪ್ರಕಾರ ಪ್ರಾದೇಶಿಕ ಅಸಮತೋಲನ ನಿವಾರಣೆಗೆ ಪೂರಕವಾದ ವಿಶೇಷ ಘಟಕ ಯೋಜನೆ, ಗಿರಿಜನ ಉಪಯೋಜನೆಗಳಿಗೆ ಒತ್ತು ನೀಡಲಾಗುವುದು ಎಂದರು.