ಬೆಂಗಳೂರು: `ನಗರದ ಬಳ್ಳಾರಿ ರಸ್ತೆಯ ಹೆಬ್ಬಾಳ ಮೇಲ್ಸೇತುವೆ ಬಳಿ ಸುಮಾರು ಎರಡು ಲಾರಿಗಳಷ್ಟು ಜೈವಿಕ ತ್ಯಾಜ್ಯ ಎಸೆದ ಕ್ರೆಸೆಂಟ್ ರಸ್ತೆಯ ಮಲ್ಲಿಗೆ ಆಸ್ಪತ್ರೆಗೆ ಹತ್ತು ಲಕ್ಷ ರೂಪಾಯಿ ದಂಡ ವಿಧಿಸಲಾಗಿದ್ದು, ಆಸ್ಪತ್ರೆಗೆ ನೀಡಿದ್ದ ಪರವಾನಗಿ ಪತ್ರವನ್ನು ಹಿಂದಕ್ಕೆ ಪಡೆಯಲಾಗಿದೆ' ಎಂದು ಬಿಬಿಎಂಪಿ ಮುಖ್ಯ ಆರೋಗ್ಯಾಧಿಕಾರಿಗಳು ತಿಳಿಸಿದ್ದಾರೆ.