ಬೆಂಗಳೂರಿನಲ್ಲಿ ಬಾಂಬ್ ಸ್ಫೋಟದ ಹಿನ್ನೆಲೆಯಲ್ಲಿ ನವದೆಹಲಿಯಲ್ಲಿ ಕಟ್ಟೆಚ್ಚರ ವಹಿಸಲಾಗಿದ್ದು, ರಾಜಧಾನಿಯನ್ನು ಪ್ರವೇಶಿಸುವ ಮತ್ತು ಹೊರಹೋಗುವ ವಾಹನಗಳ ವಿಶೇಷ ತಪಾಸಣೆ ನಡೆಸಲಾಗುತ್ತಿದೆ. ರೈಲ್ವೇ ನಿಲ್ದಾಣ, ವಿಮಾನ ನಿಲ್ದಾಣ ಮೆಟ್ರೋ ಸೇರಿದಂತೆ ನಗರದ ಪ್ರಮುಖ ಕಡೆಗಳಲ್ಲಿ ಭದ್ರತೆಗೆ ಹೆಚ್ಚಿನ ಗಮನ ನೀಡಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಹೆಬ್ಬಾಳದಲ್ಲಿ: ಮಲ್ಲೇಶ್ವರಂ ಸ್ಫೋಟ ಸಂಭವಿಸಿದ ಮೂರು ಗಂಟೆಗಳ ಬಳಿಕ ಹೆಬ್ಬಾಳ ಸೇತುವೆಯ ಬಳಿಯೂ ಇನ್ನೊಂದು ಸ್ಫೋಟ ಸಂಭವಿಸಿತು. ಮತ್ತೊಂದು ಬಾಂಬ್ ಸ್ಫೋಟಿಸಿದೆ ಎಂದು ಜನ ಕಳವಳಗೊಂಡರೂ, ಸ್ಪಲ್ಪ ಹೊತ್ತಿನ ಬಳಿಕ ಇದು ಸಿಲಿಂಡರ್ ಸ್ಫೋಟ ಎಂದು ಪೊಲೀಸರು ತಿಳಿಸಿದರು.