ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಳೆಗಾಲದ ನಂತರ ಹೆಲಿಟೂರಿಸಂ ಸೇವೆ ಆರಂಭ: ರೆಡ್ಡಿ

Last Updated 15 ಜೂನ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: ಬಹುನಿರೀಕ್ಷಿತ ಹೆಲಿಟೂರಿಸಂ ಆರಂಭಿಸಲು ಮುಂಗಾರು ಮಳೆ ಅಡ್ಡಿಯಾಗಿದ್ದು, ಮಳೆಗಾಲ ಮುಗಿದ ತಕ್ಷಣ ಈ ಸೇವೆ ಆರಂಭವಾಗಲಿದೆ ಎಂದು ಪ್ರವಾಸೋದ್ಯಮ ಸಚಿವ ಜಿ. ಜನಾರ್ದನ ರೆಡ್ಡಿ ಸ್ಪಷ್ಟಪಡಿಸಿದ್ದಾರೆ.
ವಿಧಾನಸೌಧದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಹೆಲಿಟೂರಿಸಂ ಆರಂಭಿಸಲು ಕಳೆದ ವರ್ಷ ನಡೆದ ಜಾಗತಿಕ ಬಂಡವಾಳ ಹೂಡಿಕೆದಾರರ ಸಮಾವೇಶದಲ್ಲಿ ಓಯಸಿಸ್ ಕಂಪೆನಿಯೊಂದಿಗೆ ಒಪ್ಪಂದ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

`ಅಕ್ರಮ ಎಸಗಿಲ್ಲ~: `ನಾನು ಅಕ್ರಮ ಗಣಿಗಾರಿಕೆ ನಡೆಸಿಲ್ಲ. ಸುಪ್ರೀಂಕೋರ್ಟ್ ನೇಮಕ ಮಾಡಿರುವ ಕೇಂದ್ರ ಉನ್ನತಾಧಿಕಾರ ಸಮಿತಿಯ ವರದಿ ಬಂದ ನಂತರ ಅಕ್ರಮ ಗಣಿಗಾರಿಕೆ ನಡೆಸಿದವರು ಯಾರೆಂಬುದು ಜನತೆಗೆ ತಿಳಿಯಲಿದೆ~ ಎಂದರು.

`ರಾಜ್ಯ ಸಚಿವ ಸಂಪುಟ ವಿಸ್ತರಣೆ ಆಗುತ್ತದೆಯೇ? ನಿಮ್ಮ ಬೆಂಬಲಿಗರಿಗೆ ಸಚಿವ ಸ್ಥಾನ ದೊರಕಲಿದೆಯೆ?~ ಎಂದು ಸುದ್ದಿಗಾರರು ಕೇಳಿದಾಗ, `ಇಲ್ಲಿ ಯಾರೂ ಬೆಂಬಲಿಗರಲ್ಲ. ನಾವೆಲ್ಲರೂ ಬಿಜೆಪಿ ಕಾರ್ಯಕರ್ತರು, ಸಚಿವ ಸಂಪುಟ ವಿಸ್ತರಣೆಯ ಕುರಿತು ಪಕ್ಷದ ನಾಯಕರು ನಿರ್ಧಾರ ಕೈಗೊಳ್ಳುತ್ತಾರೆ~ ಎಂದರು.

ಮನೆ ಅಂಗಳಕ್ಕೆ ಕ್ರೀಡೆ: ರಾಜ್ಯ ಯುವಜನ ಮತ್ತು ಕ್ರೀಡಾ ಇಲಾಖೆ `ಮನೆ ಅಂಗಳಕ್ಕೆ ಕ್ರೀಡೆ~ ಯೋಜನೆಯಡಿ ನೂತನವಾಗಿ ಆರಂಭಿಸಿರುವ `ಸಂಚಾರಿ ಕ್ರೀಡಾ ವಾಹನ~ಕ್ಕೆ ಚಾಲನೆ ನೀಡಿದ ರೆಡ್ಡಿ ಅವರು, ಈ ಯೋಜನೆಯನ್ನು ಸದ್ಯಕ್ಕೆ ಮಂಡ್ಯ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಇದನ್ನು ರಾಜ್ಯದ ಎಲ್ಲ ಜಿಲ್ಲೆಗಳಿಗೆ ವಿಸ್ತರಿಸಲಾಗುವುದು ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT